<p><strong>ಪಾವಗಡ:</strong> ಪಟ್ಟಣದ ಪೆನುಗೊಂಡ ರಸ್ತೆಯ ಅಂಗಡಿ ಬಳಿ ಬಂದು ಸಕ್ಕರೆ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಳೆದ ಜೂನ್ 18ರಂದು ದಿನಸಿ ಅಂಗಡಿಗೆ ಬಂದು ದಿನಸಿ ಕೊಳ್ಳುವ ನೆಪದಲ್ಲಿ 30 ಗ್ರಾಂ ಚಿನ್ನದ ಸರ ಕದ್ದು ಕಳ್ಳರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಹಾರಾಷ್ಟ್ರ ಮೂಲದ ಹಸನ್ ಆಲಿ ಮತ್ತು ಮಹಮ್ಮದ್ ಅಲಿ ಇರಾನಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಸರಗಳವು ಮಾಡಿರುವುದು ತಿಳಿದಿದೆ.</p>.<p>ಆರೋಪಿಗಳು ಒಂಟಿ ಮಹಿಳೆಯನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುವುದು, ಒಂಟಿ ವೃದ್ಧ ಮಹಿಳೆಯರನ್ನು ಯಾಮಾರಿಸಿ ಅವರಿಂದ ಬಂಗಾರದ ಸರಗಳನ್ನು ಬಿಚ್ಚಿಸಿಕೊಂಡು ಪರಾರಿಯಾಗುತ್ತಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿದಿದೆ.</p>.<p>ಆರೋಪಿಗಳಿಂದ 204 ಗ್ರಾಂ ತೂಕದ ಒಡವೆಗಳನ್ನು ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.</p>.<p><strong>ಜಾಮೀನು ಅರ್ಜಿ ವಜಾ:</strong> ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳು ಪಟ್ಟಣದ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.</p>.<p>ನ್ಯಾಯಾಧೀಶೆ ಬಿ. ಪ್ರಿಯಾಂಕ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ವಕೀಲ ಜಿ.ಎಚ್. ಸಣ್ಣೀರಪ್ಪ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಪಟ್ಟಣದ ಪೆನುಗೊಂಡ ರಸ್ತೆಯ ಅಂಗಡಿ ಬಳಿ ಬಂದು ಸಕ್ಕರೆ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಕಳೆದ ಜೂನ್ 18ರಂದು ದಿನಸಿ ಅಂಗಡಿಗೆ ಬಂದು ದಿನಸಿ ಕೊಳ್ಳುವ ನೆಪದಲ್ಲಿ 30 ಗ್ರಾಂ ಚಿನ್ನದ ಸರ ಕದ್ದು ಕಳ್ಳರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮಹಾರಾಷ್ಟ್ರ ಮೂಲದ ಹಸನ್ ಆಲಿ ಮತ್ತು ಮಹಮ್ಮದ್ ಅಲಿ ಇರಾನಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಸರಗಳವು ಮಾಡಿರುವುದು ತಿಳಿದಿದೆ.</p>.<p>ಆರೋಪಿಗಳು ಒಂಟಿ ಮಹಿಳೆಯನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುವುದು, ಒಂಟಿ ವೃದ್ಧ ಮಹಿಳೆಯರನ್ನು ಯಾಮಾರಿಸಿ ಅವರಿಂದ ಬಂಗಾರದ ಸರಗಳನ್ನು ಬಿಚ್ಚಿಸಿಕೊಂಡು ಪರಾರಿಯಾಗುತ್ತಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿದಿದೆ.</p>.<p>ಆರೋಪಿಗಳಿಂದ 204 ಗ್ರಾಂ ತೂಕದ ಒಡವೆಗಳನ್ನು ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.</p>.<p><strong>ಜಾಮೀನು ಅರ್ಜಿ ವಜಾ:</strong> ಆರೋಪಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳು ಪಟ್ಟಣದ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.</p>.<p>ನ್ಯಾಯಾಧೀಶೆ ಬಿ. ಪ್ರಿಯಾಂಕ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ವಕೀಲ ಜಿ.ಎಚ್. ಸಣ್ಣೀರಪ್ಪ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>