<p><strong>ತುಮಕೂರು:</strong> ನಗರದ ಹೊರ ವಲಯದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಜೂನ್ 3ರಿಂದ 8ರ ವರೆಗೆ ಕಲಾ ಉತ್ಸವ ಏರ್ಪಡಿಸಲಾಗಿದೆ.</p>.<p>ಒಂದು ವಾರದ ಕಾಲ ‘ಆರೋಹಣ 2024’, ‘ಸಾಂಸ್ಕೃತಿಕ ಕಲಾ ಉತ್ಸವ’ ನಡೆಯಲಿದೆ. ಕಲೆ, ಫ್ಯಾಷನ್-ಶೋ, ಸಂಗೀತ, ನೃತ್ಯ, ಸಾಹಿತ್ಯ ಮತ್ತು ರಂಗಭೂಮಿಯ ಮಿಶ್ರಣದೊಂದಿಗೆ ಈ ಉತ್ಸವ ನಡೆಯಲಿದೆ. ವೈದ್ಯಕೀಯ ಕಾಲೇಜು ಆವರಣದಲ್ಲಿ ‘ಸಾಹೇ’ ವಿಶ್ವವಿದ್ಯಾಲಯ ಕುಲಾಧಿಪತಿ ಜಿ.ಪರಮೇಶ್ವರ ಕಲಾ ಉತ್ಸವದ ಟೀಸರ್ ಬಿಡುಗಡೆಗೊಳಿಸಿದರು.</p>.<p>ನಂತರ ಮಾತನಾಡಿ, ‘ವೈದ್ಯಕೀಯ ಶಿಕ್ಷಣ ಪಡೆಯುವವರು ಶಿಕ್ಷಣದ ಜತೆಗೆ ಸಾಹಿತ್ಯ, ಸಂಗೀತ, ಚಿತ್ರಕಲೆ ಕಲಿಯಬೇಕು. ಆಗ ಅವರಲ್ಲಿ ಕೌಶಲ, ಸೌಂದರ್ಯಪ್ರಜ್ಞೆ ಬೆಳೆಯಲು ಸಾಧ್ಯ. ಇಂತಹ ಉತ್ಸವಗಳಿಗೆ ವೇದಿಕೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುವ ಕೆಲಸವಾಗುತ್ತದೆ’ ಎಂದರು.</p>.<p>ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಬದುಕಿನ ಮಹತ್ವದ ಘಟ್ಟ. ಈ ಅವಧಿಯಲ್ಲಿ ಹೆಚ್ಚಿನ ಅಧ್ಯಯನದ ಜತೆಗೆ ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜ್ಞಾನದ ಮಿತಿ ಹೆಚ್ಚಿಸಿಕೊಳ್ಳಬೇಕು. ಸಮುದಾಯದ ಒಡನಾಟ, ಸಾಮಾಜಿಕ ಕಳಕಳಿ, ನಾಯಕತ್ವ ಗುಣಗಳ ವೃದ್ಧಿಗೆ ಸಾಂಸ್ಕೃತಿಕ ಚಟುವಟಿಕೆಗಳು ಕಾರಣವಾಗುತ್ತವೆ ಎಂದು ಹೇಳಿದರು.</p>.<p>ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಪರೀಕ್ಷಾ ನಿಯಂತ್ರಕ ಗುರುಶಂಕರ್, ಕುಲಾಧಿಪತಿ ಸಲಹೆಗಾರ ವಿವೇಕ್ ವೀರಯ್ಯ, ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ, ಉಪಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್, ಸಿಇಒ ಕಿರಣ್ಕುಮಾರ್, ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರವೀಣ್ಕುಡುವ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಹೊರ ವಲಯದ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಜೂನ್ 3ರಿಂದ 8ರ ವರೆಗೆ ಕಲಾ ಉತ್ಸವ ಏರ್ಪಡಿಸಲಾಗಿದೆ.</p>.<p>ಒಂದು ವಾರದ ಕಾಲ ‘ಆರೋಹಣ 2024’, ‘ಸಾಂಸ್ಕೃತಿಕ ಕಲಾ ಉತ್ಸವ’ ನಡೆಯಲಿದೆ. ಕಲೆ, ಫ್ಯಾಷನ್-ಶೋ, ಸಂಗೀತ, ನೃತ್ಯ, ಸಾಹಿತ್ಯ ಮತ್ತು ರಂಗಭೂಮಿಯ ಮಿಶ್ರಣದೊಂದಿಗೆ ಈ ಉತ್ಸವ ನಡೆಯಲಿದೆ. ವೈದ್ಯಕೀಯ ಕಾಲೇಜು ಆವರಣದಲ್ಲಿ ‘ಸಾಹೇ’ ವಿಶ್ವವಿದ್ಯಾಲಯ ಕುಲಾಧಿಪತಿ ಜಿ.ಪರಮೇಶ್ವರ ಕಲಾ ಉತ್ಸವದ ಟೀಸರ್ ಬಿಡುಗಡೆಗೊಳಿಸಿದರು.</p>.<p>ನಂತರ ಮಾತನಾಡಿ, ‘ವೈದ್ಯಕೀಯ ಶಿಕ್ಷಣ ಪಡೆಯುವವರು ಶಿಕ್ಷಣದ ಜತೆಗೆ ಸಾಹಿತ್ಯ, ಸಂಗೀತ, ಚಿತ್ರಕಲೆ ಕಲಿಯಬೇಕು. ಆಗ ಅವರಲ್ಲಿ ಕೌಶಲ, ಸೌಂದರ್ಯಪ್ರಜ್ಞೆ ಬೆಳೆಯಲು ಸಾಧ್ಯ. ಇಂತಹ ಉತ್ಸವಗಳಿಗೆ ವೇದಿಕೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಜ್ಞಾನವನ್ನು ಒರೆಗೆ ಹಚ್ಚುವ ಕೆಲಸವಾಗುತ್ತದೆ’ ಎಂದರು.</p>.<p>ಸಿಕ್ಕ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಬದುಕಿನ ಮಹತ್ವದ ಘಟ್ಟ. ಈ ಅವಧಿಯಲ್ಲಿ ಹೆಚ್ಚಿನ ಅಧ್ಯಯನದ ಜತೆಗೆ ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜ್ಞಾನದ ಮಿತಿ ಹೆಚ್ಚಿಸಿಕೊಳ್ಳಬೇಕು. ಸಮುದಾಯದ ಒಡನಾಟ, ಸಾಮಾಜಿಕ ಕಳಕಳಿ, ನಾಯಕತ್ವ ಗುಣಗಳ ವೃದ್ಧಿಗೆ ಸಾಂಸ್ಕೃತಿಕ ಚಟುವಟಿಕೆಗಳು ಕಾರಣವಾಗುತ್ತವೆ ಎಂದು ಹೇಳಿದರು.</p>.<p>ಸಾಹೇ ವಿ.ವಿ ಕುಲಪತಿ ಕೆ.ಬಿ.ಲಿಂಗೇಗೌಡ, ರಿಜಿಸ್ಟ್ರಾರ್ ಎಂ.ಝಡ್.ಕುರಿಯನ್, ಪರೀಕ್ಷಾ ನಿಯಂತ್ರಕ ಗುರುಶಂಕರ್, ಕುಲಾಧಿಪತಿ ಸಲಹೆಗಾರ ವಿವೇಕ್ ವೀರಯ್ಯ, ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ.ಸಾಣಿಕೊಪ್ಪ, ಉಪಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್, ಸಿಇಒ ಕಿರಣ್ಕುಮಾರ್, ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಪ್ರವೀಣ್ಕುಡುವ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>