ರಾಜ್ಯದಾದ್ಯಂತ ಒಳಮೀಸಲಾತಿ ಪರವಾದ ಎಲ್ಲ ಮಾದಿಗ, ಹೊಲೆಯ ಸಂಘಟನೆಗಳನ್ನು ಒಗ್ಗೂಡಿಸುತ್ತಿದ್ದು, ನಮ್ಮ ಹಕ್ಕಿಗಾಗಿ ಉಗ್ರಹೋರಾಟದ ಅನಿವಾರ್ಯತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರು ಜಾಗೃತರಾಗಿ ಸಂಘಟಿತ ಹೋರಾಟ ಮಾಡಬೇಕಿದ್ದು, ಪ್ರತಿಗ್ರಾಮಗಳಲ್ಲೂ ಒಳಮೀಸಲಾತಿ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಒಳಮೀಸಲಾತಿ ನಿರ್ಣಾಯಕ ಹೋರಾಟಕ್ಕೆ ಸಂಘಟನೆ ಅಣಿಯಾಗುತ್ತಿದ್ದು, ಬೆಂಗಳೂರಿನಲ್ಲಿ ಬೃಹತ್ ಹೋರಾಟದ ಮೂಲಕ ಸಂಘಟಿಸೋಣ ಎಂದರು.