ತುಮಕೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವ ಧನ ಖಾತರಿಪಡಿಸಬೇಕು, ಕೊರೊನಾ ವಿರುದ್ಧದ ಕೆಲಸಕ್ಕೆ ಅಗತ್ಯವಿರುವಷ್ಟು ರಕ್ಷಣಾ ಸಾಮಗ್ರಿ ನೀಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊರೊನಾ ವಾರಿಯರ್ಸ್ ಪ್ಯಾಕೇಜ್ ₹2 ಸಾವಿರ ಮತ್ತು ₹ 3 ಸಾವಿರವನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ ಜುಲೈ 10ರಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಲು ಮುಂದಾಗಿದ್ದಾರೆ.