ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಸಚಿವರಿಗೆ ಬೇಡಿಕೆ ಈಡೇರಿಕೆ ಸಂಬಂಧ ಮನವಿ ಸಲ್ಲಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗೂ ಸುಮಾರು 10 ಮನವಿ ಪತ್ರವನ್ನು ಸಲ್ಲಿಸಿದ್ದರೂ ಕನಿಷ್ಠ ಪಕ್ಷ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಚರ್ಚಿಸಲು ಸಭೆಯನ್ನು ಕರೆಯುವ ಪ್ರಸ್ತಾಪವನ್ನೂ ಸರ್ಕಾರ ಮುಂದಿಟ್ಟಿಲ್ಲ. ಬೇರೆ ದಾರಿ ಇಲ್ಲದೆ ಕೆಲಸ ಬಹಿಷ್ಕರಿಸಿದ್ದೇವೆ ಎಂದು ಹೇಳಿದರು.