<p><strong>ತುಮಕೂರು:</strong> ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜನ ಜಾತಿ ಗಣತಿ) ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ವತಿಯಿಂದ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮೋಹನ್ ಅವರಿಗೆ ಮನವಿ ಸಲ್ಲಿಸಿ, ಸಮೀಕ್ಷೆಯಿಂದ ಕೈ ಬಿಡುವಂತೆ ಒತ್ತಾಯಿಸಲಾಯಿತು.</p>.<p>‘ಆಶಾ ಕಾರ್ಯಕರ್ತೆಯರು ಸಮೀಕ್ಷೆಗೆ ಪೂರ್ವಭಾವಿಯಾಗಿ ಪ್ರತಿ ಮನೆಗೆ ತೆರಳಿ ನಮೂನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದಕ್ಕೆ ನಿಗದಿಪಡಿಸಿದ ಗೌರವ ಧನದಲ್ಲಿ ಒಂದು ಪೈಸೆಯನ್ನೂ ನೀಡಿಲ್ಲ. ಈ ವರ್ಷ ಗೌರವ ಧನವೂ ಹೆಚ್ಚಿಸಿಲ್ಲ. ಸಮೀಕ್ಷೆಗೆ ಸ್ವಂತ ಹಣ ಖರ್ಚು ಮಾಡಿ, ಬರಿಗೈನಲ್ಲಿ ಮನೆಗೆ ಬರುವಂತಾಗಿದೆ’ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡರು.</p>.<p>ಸಮೀಕ್ಷೆಯಲ್ಲಿ ಭಾಗವಹಿಸುವ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಭಾಗದಲ್ಲಿ ₹5 ಸಾವಿರ, ನಗರದಲ್ಲಿ ₹10 ಸಾವಿರ ಗೌರವಧನ ನಿಗದಿ ಮಾಡಬೇಕು. ಇಲ್ಲವೇ ಸಮೀಕ್ಷೆ ಕಾರ್ಯದಿಂದ ಕೈಬಿಡಬೇಕು. ಈ ಹಿಂದೆ ನಡೆಸಿದ್ದ ಗ್ಯಾರಂಟಿ ಸಮೀಕ್ಷೆಯ ಬಾಕಿ ಗೌರವಧನ ₹1 ಸಾವಿರ ಕೂಡಲೇ ವಿತರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿದವರಿಗೆ ನಿಗದಿಯಾಗಿದ್ದ ಬಾಕಿ ಸಂಭಾವನೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಗೌರವ ಅಧ್ಯಕ್ಷೆ ಮಂಜುಳಾ ಗೋನವಾರ, ಜಿಲ್ಲಾ ಅಧ್ಯಕ್ಷೆ ಎಂ.ಆರ್.ನಿರ್ಮಲಾ, ಜಿಲ್ಲಾ ಸಮಿತಿ ಸದಸ್ಯರಾದ ಶೋಭಾ, ಮಂಜುಳಾ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜನ ಜಾತಿ ಗಣತಿ) ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ವತಿಯಿಂದ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮೋಹನ್ ಅವರಿಗೆ ಮನವಿ ಸಲ್ಲಿಸಿ, ಸಮೀಕ್ಷೆಯಿಂದ ಕೈ ಬಿಡುವಂತೆ ಒತ್ತಾಯಿಸಲಾಯಿತು.</p>.<p>‘ಆಶಾ ಕಾರ್ಯಕರ್ತೆಯರು ಸಮೀಕ್ಷೆಗೆ ಪೂರ್ವಭಾವಿಯಾಗಿ ಪ್ರತಿ ಮನೆಗೆ ತೆರಳಿ ನಮೂನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದಕ್ಕೆ ನಿಗದಿಪಡಿಸಿದ ಗೌರವ ಧನದಲ್ಲಿ ಒಂದು ಪೈಸೆಯನ್ನೂ ನೀಡಿಲ್ಲ. ಈ ವರ್ಷ ಗೌರವ ಧನವೂ ಹೆಚ್ಚಿಸಿಲ್ಲ. ಸಮೀಕ್ಷೆಗೆ ಸ್ವಂತ ಹಣ ಖರ್ಚು ಮಾಡಿ, ಬರಿಗೈನಲ್ಲಿ ಮನೆಗೆ ಬರುವಂತಾಗಿದೆ’ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡರು.</p>.<p>ಸಮೀಕ್ಷೆಯಲ್ಲಿ ಭಾಗವಹಿಸುವ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಭಾಗದಲ್ಲಿ ₹5 ಸಾವಿರ, ನಗರದಲ್ಲಿ ₹10 ಸಾವಿರ ಗೌರವಧನ ನಿಗದಿ ಮಾಡಬೇಕು. ಇಲ್ಲವೇ ಸಮೀಕ್ಷೆ ಕಾರ್ಯದಿಂದ ಕೈಬಿಡಬೇಕು. ಈ ಹಿಂದೆ ನಡೆಸಿದ್ದ ಗ್ಯಾರಂಟಿ ಸಮೀಕ್ಷೆಯ ಬಾಕಿ ಗೌರವಧನ ₹1 ಸಾವಿರ ಕೂಡಲೇ ವಿತರಿಸಬೇಕು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿದವರಿಗೆ ನಿಗದಿಯಾಗಿದ್ದ ಬಾಕಿ ಸಂಭಾವನೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾ ಗೌರವ ಅಧ್ಯಕ್ಷೆ ಮಂಜುಳಾ ಗೋನವಾರ, ಜಿಲ್ಲಾ ಅಧ್ಯಕ್ಷೆ ಎಂ.ಆರ್.ನಿರ್ಮಲಾ, ಜಿಲ್ಲಾ ಸಮಿತಿ ಸದಸ್ಯರಾದ ಶೋಭಾ, ಮಂಜುಳಾ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>