<p><strong>ಕುಣಿಗಲ್</strong>: ತಾಲ್ಲೂಕಿನ ಎಡೆಯೂರು ಹೋಬಳಿ ಜಿಡ್ಡಿಗೆರೆ ಗ್ರಾಮದಲ್ಲಿ ತೋಟದ ಕೆಲಸಕ್ಕೆಂದು ಬಂದಿದ್ದ ಭೂತರಾಜು ಮಾಲೀಕ ಕೃಷ್ಣ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ₹55 ಸಾವಿರ ದೋಚಿದ್ದಲ್ಲದೆ, ಬೆದರಿಸಿ ಬ್ಯಾಂಕ್ ಖಾತೆಗೆ ₹1 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಪರಾರಿಯಾಗಿದ್ದಾನೆ.</p>.<p>ಜಿಡ್ಡಿಗೆರೆ ಗ್ರಾಮದ ಕೃಷ್ಣ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗ್ರಾಮದಲ್ಲಿ ತೋಟದ ಮನೆ, ಕುರಿ ಶೆಡ್ ಮತ್ತು ಕೋಳಿ ಫಾರಂ ಹೊಂದಿದ್ದಾರೆ. ಸ್ನೇಹಿತರ ಮೂಲಕ ಪರಿಚಯವಾಗಿದ್ದ ಕೊರಟಗೆರೆ ತಾಲ್ಲೂಕಿನ ಭೂತರಾಜು ಸೆಪ್ಟೆಂಬರ್ 8ರಂದು ಕೆಲಸಕ್ಕೆ ಸೇರಿದ್ದ.</p>.<p>ಸೆಪ್ಟೆಂಬರ್ 11ರಂದು ರಾತ್ರಿ ಕೃಷ್ಣ ಅವರು ತೋಟದ ಮನೆಯಲ್ಲಿರುವಾಗ ಭೂತರಾಜು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಜೇಬಿನಲ್ಲಿದ್ದ ₹55 ಸಾವಿರ ದೋಚಿದ್ದಲ್ಲದೆ, ₹2 ಲಕ್ಷವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ಬೆದರಿಕೆ ಹಾಕಿದ್ದಾನೆ. ಆಗ ಕೃಷ್ಣ ಅವರು ₹1 ಲಕ್ಷವನ್ನು ವರ್ಗಾಯಿಸಿದ್ದಾರೆ. ಮತ್ತೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸುವಾಗ ತೀವ್ರ ಪ್ರತಿರೋಧವೊಡ್ಡಿದ ಕೃಷ್ಣ ಅವರು ಭೂತರಾಜುನ್ನು ಮನೆಯಿಂದ ಹೊರದೂಡಿ, ಸ್ನೇಹಿತರಿಗೆ ಕರೆ ಮಾಡಿದಾಗ ಭೂತರಾಜು ಪರಾರಿಯಾಗಿದ್ದಾನೆ.</p>.<p>ಸ್ನೇಹಿತರಾದ ಅಭಿಷೇಕ್ ಮತ್ತು ಖಲೀಲ್ ಬಂದು ತೀವ್ರವಾಗಿಗಾಯಗೊಂಡಿದ್ದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಕೃಷ್ ಅವರ ಹೇಳಿಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ ಎಡೆಯೂರು ಹೋಬಳಿ ಜಿಡ್ಡಿಗೆರೆ ಗ್ರಾಮದಲ್ಲಿ ತೋಟದ ಕೆಲಸಕ್ಕೆಂದು ಬಂದಿದ್ದ ಭೂತರಾಜು ಮಾಲೀಕ ಕೃಷ್ಣ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ₹55 ಸಾವಿರ ದೋಚಿದ್ದಲ್ಲದೆ, ಬೆದರಿಸಿ ಬ್ಯಾಂಕ್ ಖಾತೆಗೆ ₹1 ಲಕ್ಷ ವರ್ಗಾವಣೆ ಮಾಡಿಸಿಕೊಂಡು ಪರಾರಿಯಾಗಿದ್ದಾನೆ.</p>.<p>ಜಿಡ್ಡಿಗೆರೆ ಗ್ರಾಮದ ಕೃಷ್ಣ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಗ್ರಾಮದಲ್ಲಿ ತೋಟದ ಮನೆ, ಕುರಿ ಶೆಡ್ ಮತ್ತು ಕೋಳಿ ಫಾರಂ ಹೊಂದಿದ್ದಾರೆ. ಸ್ನೇಹಿತರ ಮೂಲಕ ಪರಿಚಯವಾಗಿದ್ದ ಕೊರಟಗೆರೆ ತಾಲ್ಲೂಕಿನ ಭೂತರಾಜು ಸೆಪ್ಟೆಂಬರ್ 8ರಂದು ಕೆಲಸಕ್ಕೆ ಸೇರಿದ್ದ.</p>.<p>ಸೆಪ್ಟೆಂಬರ್ 11ರಂದು ರಾತ್ರಿ ಕೃಷ್ಣ ಅವರು ತೋಟದ ಮನೆಯಲ್ಲಿರುವಾಗ ಭೂತರಾಜು ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಜೇಬಿನಲ್ಲಿದ್ದ ₹55 ಸಾವಿರ ದೋಚಿದ್ದಲ್ಲದೆ, ₹2 ಲಕ್ಷವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ಬೆದರಿಕೆ ಹಾಕಿದ್ದಾನೆ. ಆಗ ಕೃಷ್ಣ ಅವರು ₹1 ಲಕ್ಷವನ್ನು ವರ್ಗಾಯಿಸಿದ್ದಾರೆ. ಮತ್ತೆ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸುವಾಗ ತೀವ್ರ ಪ್ರತಿರೋಧವೊಡ್ಡಿದ ಕೃಷ್ಣ ಅವರು ಭೂತರಾಜುನ್ನು ಮನೆಯಿಂದ ಹೊರದೂಡಿ, ಸ್ನೇಹಿತರಿಗೆ ಕರೆ ಮಾಡಿದಾಗ ಭೂತರಾಜು ಪರಾರಿಯಾಗಿದ್ದಾನೆ.</p>.<p>ಸ್ನೇಹಿತರಾದ ಅಭಿಷೇಕ್ ಮತ್ತು ಖಲೀಲ್ ಬಂದು ತೀವ್ರವಾಗಿಗಾಯಗೊಂಡಿದ್ದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.</p>.<p>ಕೃಷ್ ಅವರ ಹೇಳಿಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>