<p><strong>ತುಮಕೂರು:</strong> ರೌಡಿಶೀಟರ್ ಮಂಜನಾಥ್ (32) ಅಲಿಯಾಸ್ ಉಚ್ಚೆಮಂಜನ ಕೊಲೆ ಪ್ರಕರಣದ ಆರೋಪಿ ವಿಕಾಸ್ (24) ಎಡಗಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ವಿಕಾಸ್ ಗುಬ್ಬಿ ತಾಲ್ಲೂಕು ಗೌರಿಪುರದವನು.</p>.<p>ನಗರದ ಗಂಗೋತ್ರಿ ರಸ್ತೆಯಲ್ಲಿ ಗುರುವಾರ ರಾತ್ರಿ ಮಂಜುನಾಥ್ ಕೊಲೆಯಾಗಿತ್ತು. ಮಂಜುನಾಥ್ ಈ ಹಿಂದೆ ಹತ್ಯೆಯಾದ ಮಾಜಿ ಮೇಯರ್ ಗಡ್ಡರವಿ ಶಿಷ್ಯನಾಗಿದ್ದ. ನಗರಸಭೆ ಮಾಜಿ ಸದಸ್ಯ ಹಾಗೂ ರೌಡಿ ಅಂಜನಿಯ ಅಕ್ಕನ ಮಗನಾಗಿದ್ದ.</p>.<p>ಆರೋಪಿಗಳ ಪತ್ತೆಗೆಪೊಲೀಸರ ಮೂರು ತಂಡ ರಚಿಸಲಾಗಿತ್ತು.</p>.<p>ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ವಿಕಾಸ್ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು.</p>.<p>ತಿಲಕ್ ಪಾರ್ಕ್ ಠಾಣೆಯ ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಆರೋಪಿ ಬಂಧನಕ್ಕೆ ಮುಂದಾಗಿದ್ದರು.</p>.<p>ಎಎಸ್ಐ ಪರಮೇಶ್ವರ ಅವರ ಮೇಲೆ ವಿಕಾಸ್ ಡ್ರಾಗರ್ನಿಂದಹಲ್ಲೆ ಮಾಡಿದ. ಎಎಸ್ಐ ಎಡ ತೋಳಿಗೆಗಾಯವಾಗಿದೆ. ನಂತರ ಮತ್ತೊಬ್ಬ ಸಿಬ್ಬಂದಿ ಬಳಿ ದಾಳಿ ಮಾಡಲು ಮುಂದಾದಾಗ ಪಿಎಸ್ಐ ನವೀನ್ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದರು. ಈ ಎಚ್ಚರಿಕೆ ಲೆಕ್ಕಿಸದೆ ಆರೋಪಿ ಪೊಲೀಸರ ಮೇಲೆ ಎರಗಲು ಮುಂದಾದಾಗ ನವೀನ್, ಆರೋಪಿ ಎಡಗಾಲಿಗೆ ಗುಂಡುಹಾರಿಸಿದ್ದಾರೆ. ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಏಳು ಪ್ರಕರಣಗಳಲ್ಲಿ ಆರೋಪಿ</strong><br />ಆರೋಪಿ ವಿಕಾಸ್ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಏಳು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಲಾಕ್ಡೌನ್ ಸಂದರ್ಭದಲ್ಲಿ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿಯಲ್ಲಿ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣದ ಆರೋಪಿಯೂ ಈತನಾಗಿದ್ದಾನೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ತಿಳಿಸಿದ್ದಾರೆ.</p>.<p>ಮಂಜುನಾಥನ ಹತ್ಯೆ ಪ್ರಕರಣದಲ್ಲಿ ಇನ್ನು ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಈಗಾಗಲೇ ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಆರೋಪಿಗಳ ಹೆಸರನ್ನು ಈ ಸಂದರ್ಭದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರೌಡಿಶೀಟರ್ ಮಂಜನಾಥ್ (32) ಅಲಿಯಾಸ್ ಉಚ್ಚೆಮಂಜನ ಕೊಲೆ ಪ್ರಕರಣದ ಆರೋಪಿ ವಿಕಾಸ್ (24) ಎಡಗಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ. ವಿಕಾಸ್ ಗುಬ್ಬಿ ತಾಲ್ಲೂಕು ಗೌರಿಪುರದವನು.</p>.<p>ನಗರದ ಗಂಗೋತ್ರಿ ರಸ್ತೆಯಲ್ಲಿ ಗುರುವಾರ ರಾತ್ರಿ ಮಂಜುನಾಥ್ ಕೊಲೆಯಾಗಿತ್ತು. ಮಂಜುನಾಥ್ ಈ ಹಿಂದೆ ಹತ್ಯೆಯಾದ ಮಾಜಿ ಮೇಯರ್ ಗಡ್ಡರವಿ ಶಿಷ್ಯನಾಗಿದ್ದ. ನಗರಸಭೆ ಮಾಜಿ ಸದಸ್ಯ ಹಾಗೂ ರೌಡಿ ಅಂಜನಿಯ ಅಕ್ಕನ ಮಗನಾಗಿದ್ದ.</p>.<p>ಆರೋಪಿಗಳ ಪತ್ತೆಗೆಪೊಲೀಸರ ಮೂರು ತಂಡ ರಚಿಸಲಾಗಿತ್ತು.</p>.<p>ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ವಿಕಾಸ್ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿತ್ತು.</p>.<p>ತಿಲಕ್ ಪಾರ್ಕ್ ಠಾಣೆಯ ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಆರೋಪಿ ಬಂಧನಕ್ಕೆ ಮುಂದಾಗಿದ್ದರು.</p>.<p>ಎಎಸ್ಐ ಪರಮೇಶ್ವರ ಅವರ ಮೇಲೆ ವಿಕಾಸ್ ಡ್ರಾಗರ್ನಿಂದಹಲ್ಲೆ ಮಾಡಿದ. ಎಎಸ್ಐ ಎಡ ತೋಳಿಗೆಗಾಯವಾಗಿದೆ. ನಂತರ ಮತ್ತೊಬ್ಬ ಸಿಬ್ಬಂದಿ ಬಳಿ ದಾಳಿ ಮಾಡಲು ಮುಂದಾದಾಗ ಪಿಎಸ್ಐ ನವೀನ್ ಶರಣಾಗುವಂತೆ ಹೇಳಿ ಗಾಳಿಯಲ್ಲಿ ಗುಂಡು ಹಾರಿಸಿದರು. ಈ ಎಚ್ಚರಿಕೆ ಲೆಕ್ಕಿಸದೆ ಆರೋಪಿ ಪೊಲೀಸರ ಮೇಲೆ ಎರಗಲು ಮುಂದಾದಾಗ ನವೀನ್, ಆರೋಪಿ ಎಡಗಾಲಿಗೆ ಗುಂಡುಹಾರಿಸಿದ್ದಾರೆ. ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ಏಳು ಪ್ರಕರಣಗಳಲ್ಲಿ ಆರೋಪಿ</strong><br />ಆರೋಪಿ ವಿಕಾಸ್ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಏಳು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ಲಾಕ್ಡೌನ್ ಸಂದರ್ಭದಲ್ಲಿ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿಯಲ್ಲಿ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣದ ಆರೋಪಿಯೂ ಈತನಾಗಿದ್ದಾನೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ.ಉದೇಶ್ ತಿಳಿಸಿದ್ದಾರೆ.</p>.<p>ಮಂಜುನಾಥನ ಹತ್ಯೆ ಪ್ರಕರಣದಲ್ಲಿ ಇನ್ನು ಯಾರು ಯಾರು ಭಾಗಿ ಆಗಿದ್ದಾರೆ ಎನ್ನುವ ಮಾಹಿತಿ ಇದೆ. ಈಗಾಗಲೇ ಕೊಲೆ ನಡೆದ ಸ್ಥಳದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿದೆ. ಆರೋಪಿಗಳ ಹೆಸರನ್ನು ಈ ಸಂದರ್ಭದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>