ಲೋಕಸಭಾ ಟಿಕೆಟ್ ಆಕಾಂಕ್ಷಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀದರ್ ಹಾಲಪ್ಪಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲು ಹಾಲಪ್ಪ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ‘ಯಾರ್ ರೀ ಅವನು ಯಾರಿಗೆ ಮತ ಹಾಕಿಸಿದ್ದಾನೆ. ಮಧುಗಿರಿಯಲ್ಲಿ ನಾನು ಐದು ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಐದು ಚುನಾವಣೆಗಳಲ್ಲಿ ಒಂದು ಮತ ಹಾಕಿಸಿದ್ದಾನಾ ಕೇಳಿ’ ಎಂದು ಹಾಲಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.