<p><strong>ತುಮಕೂರು:</strong> ರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾಗಲು ವಿಫಲ ಯತ್ನ ನಡೆಸಿದ ಘಟನೆ ನಗರದ ಶಿರಾಗೇಟ್ ಸಮೀಪ ಶನಿವಾರ ನಡೆದಿದೆ.</p>.<p>ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಊಟ ಮುಗಿಸಿಕೊಂಡು ರಾತ್ರಿ 10.30ರ ವೇಳೆಗೆ ಶಿರಾ ಗೇಟ್ ಹಾಸಿಂಗ್ ಬೋರ್ಡ್ ಸಮೀಪದ ಗಣಪತಿ ದೇವಸ್ಥಾನದ ರಸ್ತೆಯಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ತಲೆಗೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಯೊಬ್ಬ ಟಿವಿಎಸ್ ಬೈಕ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದಾನೆ.</p>.<p>ಹೀಗೇಕೆ ಹಿಂಬಾಲಿಸುತ್ತಿದ್ದಿಯಾ ಎಂದು ದೂರದಲ್ಲಿ ನಿಂತು ಪ್ರಶ್ನಿಸಿದ್ದಾರೆ. ಇದಕ್ಕೆ ಏನು ಉತ್ತರಿಸದ ದುಷ್ಕರ್ಮಿ ಏಕಾ ಏಕಿ ಬೈಕ್ನಲ್ಲಿ ವೇಗವಾಗಿ ಇವರಿದ್ದಲ್ಲಿಗೆ ಬಂದು ಸರ ಕಸಿಯಲು ಯತ್ನಿಸಿದ್ದಾನೆ. ಮಹಿಳೆ ಜೋರಾಗಿ ಕಿರುಚಿದ್ದಾರೆ. ದುಷ್ಕರ್ಮಿ ಪರಾರಿಯಾಗಿದ್ದಾನೆ.</p>.<p>ನಂತರ ದೂರದಲ್ಲಿ ಮತ್ತೊಂದು ಬೈಕ್ನಲ್ಲಿದ್ದ ದುಷ್ಕರ್ಮಿಯ ಸ್ನೇಹಿತ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹತ್ತಿರಕ್ಕೆ ಬಂದಿದ್ದಾನೆ. ಆ ವೇಳೆಗೆ ಜನರು ಸ್ಥಳಕ್ಕೆ ಧಾವಿಸಿದ್ದನ್ನು ನೋಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ರಸ್ತೆಯಲ್ಲಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾಗಲು ವಿಫಲ ಯತ್ನ ನಡೆಸಿದ ಘಟನೆ ನಗರದ ಶಿರಾಗೇಟ್ ಸಮೀಪ ಶನಿವಾರ ನಡೆದಿದೆ.</p>.<p>ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಊಟ ಮುಗಿಸಿಕೊಂಡು ರಾತ್ರಿ 10.30ರ ವೇಳೆಗೆ ಶಿರಾ ಗೇಟ್ ಹಾಸಿಂಗ್ ಬೋರ್ಡ್ ಸಮೀಪದ ಗಣಪತಿ ದೇವಸ್ಥಾನದ ರಸ್ತೆಯಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ತಲೆಗೆ ಬಟ್ಟೆ ಕಟ್ಟಿಕೊಂಡಿದ್ದ ದುಷ್ಕರ್ಮಿಯೊಬ್ಬ ಟಿವಿಎಸ್ ಬೈಕ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದಾನೆ.</p>.<p>ಹೀಗೇಕೆ ಹಿಂಬಾಲಿಸುತ್ತಿದ್ದಿಯಾ ಎಂದು ದೂರದಲ್ಲಿ ನಿಂತು ಪ್ರಶ್ನಿಸಿದ್ದಾರೆ. ಇದಕ್ಕೆ ಏನು ಉತ್ತರಿಸದ ದುಷ್ಕರ್ಮಿ ಏಕಾ ಏಕಿ ಬೈಕ್ನಲ್ಲಿ ವೇಗವಾಗಿ ಇವರಿದ್ದಲ್ಲಿಗೆ ಬಂದು ಸರ ಕಸಿಯಲು ಯತ್ನಿಸಿದ್ದಾನೆ. ಮಹಿಳೆ ಜೋರಾಗಿ ಕಿರುಚಿದ್ದಾರೆ. ದುಷ್ಕರ್ಮಿ ಪರಾರಿಯಾಗಿದ್ದಾನೆ.</p>.<p>ನಂತರ ದೂರದಲ್ಲಿ ಮತ್ತೊಂದು ಬೈಕ್ನಲ್ಲಿದ್ದ ದುಷ್ಕರ್ಮಿಯ ಸ್ನೇಹಿತ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಹತ್ತಿರಕ್ಕೆ ಬಂದಿದ್ದಾನೆ. ಆ ವೇಳೆಗೆ ಜನರು ಸ್ಥಳಕ್ಕೆ ಧಾವಿಸಿದ್ದನ್ನು ನೋಡಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>