<p><strong>ತುಮಕೂರು</strong>: ಈಗಿನ ಶಿಕ್ಷಣ ಸಮಾನ ಅವಕಾಶ ಒದಗಿಸುವಲ್ಲಿ ವಿಫಲವಾಗಿದೆ. ವೈಚಾರಿಕತೆ ಬೆಳೆಸುವುದರಲ್ಲಿ ಸೋತಿದೆ ಎಂದು ಲೇಖಕಿ ಆಶಾ ಬಗ್ಗನಡು ವಿಷಾದಿಸಿದರು.</p>.<p>ನಗರದಲ್ಲಿ ಶನಿವಾರ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಭೀಮಾ ಕೊರೆಗಾಂವ್ ವಿಜಯೋತ್ಸವ, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ಜನ್ಮ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ‘ಭಾರತದಲ್ಲಿ ದುಡಿಯುವ ಮಹಿಳೆಯರ ಹೋರಾಟದ ಹೆಜ್ಜೆಗಳು’ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾಮಾಜಿಕ ಅನಿಷ್ಟಗಳಿಗೆ ಶಿಕ್ಷಣ ಮದ್ದಾಗಬಹುದು ಎಂಬ ನಮ್ಮ ತಿಳಿವಳಿಕೆ ತಪ್ಪಾಗಿದೆ. ವಿದ್ಯಾವಂತರು ವಿಚಾರವಂತರಾಗದೆ, ಸಮಾಜಮುಖಿಯಾಗದೆ ಸ್ವಾರ್ಥದಲ್ಲಿ ಮುಳುಗಿದ್ದಾರೆ. ವಿಶ್ವ ಸಂಸ್ಥೆ ಮಾಹಿತಿ ಪ್ರಕಾರ ಭಾರತದಲ್ಲಿ ಶೇ 30ರಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ಹೊರಗುಳಿಯುತ್ತಿದ್ದಾರೆ ಎಂದರು.</p>.<p>ಶಿಕ್ಷಣ ವಂಚಿತ ಮಕ್ಕಳು ಅಪೌಷ್ಟಿಕತೆ, ಕಂದಾಚಾರಕ್ಕೆ ಒಳಗಾಗಿ ಮನುವಾದದ ಕಪಿಮುಷ್ಟಿಯಲ್ಲಿ ಸಿಲುಕುತ್ತಿದ್ದಾರೆ. ಇಂತಹ ಅನಿಷ್ಟಗಳ ವಿರುದ್ಧ ದುಡಿಯುವ ಮಹಿಳೆಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ನಮಗೆಲ್ಲ ಮಾದರಿ ಎಂದು ಹೇಳಿದರು.</p>.<p>ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯ ಸಂಚಾಲಕಿ ಅನುಪಮಾ, ‘ಸಮಾಜದಲ್ಲಿ ಮೌಢ್ಯ, ಜಾತಿ ಪದ್ಧತಿ ತನ್ನ ಪಟ್ಟುಗಳನ್ನು ಬಿಗಿಗೊಳಿಸುತ್ತಿದೆ. ಶಾಲೆಗಳೇ ಜಾತೀಯತೆ ಪರಿಚಯಿಸುವ ತಾಣಗಳಾಗಿವೆ. ಇಂತಹ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಹೋರಾಟ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು’ ಎಂದು ತಿಳಿಸಿದರು.</p>.<p>ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಪದಾಧಿಕಾರಿಗಳಾದ ಅರುಣ್, ಶಂಕ್ರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ, ಮುಬಾರಕ್, ಶಾಬುದ್ದೀನ್, ಶಾರದಮ್ಮ, ಗಂಗಾ, ಗುಲ್ನಾಜ್, ಮಂಗಳಮ್ಮ, ಹನುಮಕ್ಕ, ಪೂರ್ಣಿಮಾ, ವಸಂತಮ್ಮ, ಅಬೀಬುನ್ನೀಸಾ, ಜಯಮ್ಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಈಗಿನ ಶಿಕ್ಷಣ ಸಮಾನ ಅವಕಾಶ ಒದಗಿಸುವಲ್ಲಿ ವಿಫಲವಾಗಿದೆ. ವೈಚಾರಿಕತೆ ಬೆಳೆಸುವುದರಲ್ಲಿ ಸೋತಿದೆ ಎಂದು ಲೇಖಕಿ ಆಶಾ ಬಗ್ಗನಡು ವಿಷಾದಿಸಿದರು.</p>.<p>ನಗರದಲ್ಲಿ ಶನಿವಾರ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ ಕೊಳೆಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ಭೀಮಾ ಕೊರೆಗಾಂವ್ ವಿಜಯೋತ್ಸವ, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ಜನ್ಮ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ‘ಭಾರತದಲ್ಲಿ ದುಡಿಯುವ ಮಹಿಳೆಯರ ಹೋರಾಟದ ಹೆಜ್ಜೆಗಳು’ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಸಾಮಾಜಿಕ ಅನಿಷ್ಟಗಳಿಗೆ ಶಿಕ್ಷಣ ಮದ್ದಾಗಬಹುದು ಎಂಬ ನಮ್ಮ ತಿಳಿವಳಿಕೆ ತಪ್ಪಾಗಿದೆ. ವಿದ್ಯಾವಂತರು ವಿಚಾರವಂತರಾಗದೆ, ಸಮಾಜಮುಖಿಯಾಗದೆ ಸ್ವಾರ್ಥದಲ್ಲಿ ಮುಳುಗಿದ್ದಾರೆ. ವಿಶ್ವ ಸಂಸ್ಥೆ ಮಾಹಿತಿ ಪ್ರಕಾರ ಭಾರತದಲ್ಲಿ ಶೇ 30ರಷ್ಟು ಹೆಣ್ಣು ಮಕ್ಕಳು ಶಿಕ್ಷಣದಿಂದ ಹೊರಗುಳಿಯುತ್ತಿದ್ದಾರೆ ಎಂದರು.</p>.<p>ಶಿಕ್ಷಣ ವಂಚಿತ ಮಕ್ಕಳು ಅಪೌಷ್ಟಿಕತೆ, ಕಂದಾಚಾರಕ್ಕೆ ಒಳಗಾಗಿ ಮನುವಾದದ ಕಪಿಮುಷ್ಟಿಯಲ್ಲಿ ಸಿಲುಕುತ್ತಿದ್ದಾರೆ. ಇಂತಹ ಅನಿಷ್ಟಗಳ ವಿರುದ್ಧ ದುಡಿಯುವ ಮಹಿಳೆಯರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ನಮಗೆಲ್ಲ ಮಾದರಿ ಎಂದು ಹೇಳಿದರು.</p>.<p>ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯ ಸಂಚಾಲಕಿ ಅನುಪಮಾ, ‘ಸಮಾಜದಲ್ಲಿ ಮೌಢ್ಯ, ಜಾತಿ ಪದ್ಧತಿ ತನ್ನ ಪಟ್ಟುಗಳನ್ನು ಬಿಗಿಗೊಳಿಸುತ್ತಿದೆ. ಶಾಲೆಗಳೇ ಜಾತೀಯತೆ ಪರಿಚಯಿಸುವ ತಾಣಗಳಾಗಿವೆ. ಇಂತಹ ಕಾಲಘಟ್ಟದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಹೋರಾಟ ಮಹಿಳೆಯರಿಗೆ ಸ್ಫೂರ್ತಿಯಾಗಬೇಕು’ ಎಂದು ತಿಳಿಸಿದರು.</p>.<p>ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಂಹಮೂರ್ತಿ, ಪದಾಧಿಕಾರಿಗಳಾದ ಅರುಣ್, ಶಂಕ್ರಯ್ಯ, ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ, ಮುಬಾರಕ್, ಶಾಬುದ್ದೀನ್, ಶಾರದಮ್ಮ, ಗಂಗಾ, ಗುಲ್ನಾಜ್, ಮಂಗಳಮ್ಮ, ಹನುಮಕ್ಕ, ಪೂರ್ಣಿಮಾ, ವಸಂತಮ್ಮ, ಅಬೀಬುನ್ನೀಸಾ, ಜಯಮ್ಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>