<p><strong>ತುರುವೇಕೆರೆ</strong>: ರೇಬಿಸ್ ಮಾರಣಾಂತಿಕ ಕಾಯಿಲೆಯಾಗಿದ್ದು ಜನರು ಸಾಕುಪ್ರಾಣಿಗಳ ಬಗ್ಗೆ ಪ್ರೀತಿ ತೋರುವುದರ ಜೊತೆಗೆ ಮುನ್ನೆಚ್ಚರಿಕೆವಹಿಸಬೇಕಿದೆ ಎಂದು ಪಶುವೈದ್ಯ ಡಾ.ಶ್ರೀನಿವಾಸ್ ಪೂಜಾರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪಶುವೈದ್ಯ ಇಲಾಖೆಯ ಆವರಣದಲ್ಲಿ ಪಟ್ಟಣ ಪಂಚಾಯಿತಿ ಹಾಗೂ ಪಶುವೈದ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರೇಬಿಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮನೆಯಲ್ಲಿ ಮುದ್ದಾಗಿ ಸಾಕುವ ನಾಯಿ, ಬೆಕ್ಕು ಮುಂತಾದ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ರೇಬಿಸ್ ಚುಚ್ಚುಮದ್ದು ಹಾಕಿಸಬೇಕು. ರೇಬಿಸ್ ರೋಗವು ಪ್ರಾಣಿಗಳಿಂದ ಮನುಷ್ಯರಿಗೆ ಹರಡಿ ಮನುಷ್ಯನ ನರಮಂಡಲವನ್ನು ಹಾನಿಗೊಳಿಸಿ ಸಾವು ಸಂಭವಿಸುವಂತೆ ಮಾಡುತ್ತದೆ. ಹಾಗಾಗಿ, ಜನರು ಇದರ ಬಗ್ಗೆ ಎಚ್ಚರವಹಿಸುವುದು ಅತ್ಯಗತ್ಯ ಎಂದರು.</p>.<p>ಲಯನ್ಸ್ ಅಧ್ಯಕ್ಷ ಮಿಹಿರಕುಮಾರ್ ಮಾತನಾಡಿ, ಸಾಕು ಪ್ರಾಣಿಗಳನ್ನು ಹೊಂದಿರುವವರು ಅವುಗಳ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಪಶುವೈದ್ಯ ಇಲಾಖೆಯ ಉಪ ನಿರ್ದೇಶಕ ಸದಾಶಿವಯ್ಯ, ಲಯನ್ಸ್ ಪದಾಧಿಕಾರಿಗಳಾದ ರಾಜಣ್ಣ, ಮಹೇಶ್, ರವಿ, ನಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ</strong>: ರೇಬಿಸ್ ಮಾರಣಾಂತಿಕ ಕಾಯಿಲೆಯಾಗಿದ್ದು ಜನರು ಸಾಕುಪ್ರಾಣಿಗಳ ಬಗ್ಗೆ ಪ್ರೀತಿ ತೋರುವುದರ ಜೊತೆಗೆ ಮುನ್ನೆಚ್ಚರಿಕೆವಹಿಸಬೇಕಿದೆ ಎಂದು ಪಶುವೈದ್ಯ ಡಾ.ಶ್ರೀನಿವಾಸ್ ಪೂಜಾರ್ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪಶುವೈದ್ಯ ಇಲಾಖೆಯ ಆವರಣದಲ್ಲಿ ಪಟ್ಟಣ ಪಂಚಾಯಿತಿ ಹಾಗೂ ಪಶುವೈದ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರೇಬಿಸ್ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮನೆಯಲ್ಲಿ ಮುದ್ದಾಗಿ ಸಾಕುವ ನಾಯಿ, ಬೆಕ್ಕು ಮುಂತಾದ ಸಾಕುಪ್ರಾಣಿಗಳಿಗೆ ಸಕಾಲದಲ್ಲಿ ರೇಬಿಸ್ ಚುಚ್ಚುಮದ್ದು ಹಾಕಿಸಬೇಕು. ರೇಬಿಸ್ ರೋಗವು ಪ್ರಾಣಿಗಳಿಂದ ಮನುಷ್ಯರಿಗೆ ಹರಡಿ ಮನುಷ್ಯನ ನರಮಂಡಲವನ್ನು ಹಾನಿಗೊಳಿಸಿ ಸಾವು ಸಂಭವಿಸುವಂತೆ ಮಾಡುತ್ತದೆ. ಹಾಗಾಗಿ, ಜನರು ಇದರ ಬಗ್ಗೆ ಎಚ್ಚರವಹಿಸುವುದು ಅತ್ಯಗತ್ಯ ಎಂದರು.</p>.<p>ಲಯನ್ಸ್ ಅಧ್ಯಕ್ಷ ಮಿಹಿರಕುಮಾರ್ ಮಾತನಾಡಿ, ಸಾಕು ಪ್ರಾಣಿಗಳನ್ನು ಹೊಂದಿರುವವರು ಅವುಗಳ ಆರೋಗ್ಯದ ಬಗ್ಗೆ ಗಮನಹರಿಸಬೇಕು. ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ಹೊಂದಬೇಕು ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಪಶುವೈದ್ಯ ಇಲಾಖೆಯ ಉಪ ನಿರ್ದೇಶಕ ಸದಾಶಿವಯ್ಯ, ಲಯನ್ಸ್ ಪದಾಧಿಕಾರಿಗಳಾದ ರಾಜಣ್ಣ, ಮಹೇಶ್, ರವಿ, ನಾಗರಾಜು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>