<p><strong>ಶಿರಾ</strong>: ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ (40) ಎಂಬುವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ನಿತಿನ್ ತುಳಸಿರಾಮ್ ಪತ್ನಿ ಯಶೋದ ಅವರ ಮೊದಲ ಗಂಡನ ಮಗ ಹರೀಶ್ ಕೊಲೆ ಮಾಡಿದ ಆರೋಪಿ.</p><p>ಮಹಾರಾಷ್ಟ್ರದಿಂದ ಬಂದು ಶಿರಾ ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ 3 ವರ್ಷದಿಂದ ಇದ್ದಿಲು ಸುಡುವ ಕೆಲಸ ಮಾಡಿಕೊಂಡಿದ್ದರು. </p><p>ನಿತಿನ್ ತುಳಸಿರಾಮ್ ಅವರು ಯಶೋದ ಅವರನ್ನು ಎರಡನೇ ಮದುವೆ ಮಾಡಕೊಂಡಿದ್ದರು. ಯಶೋದಗೆ ಸಹ ಇದು ಎರಡನೇ ಮದುವೆಯಾಗಿದ್ದು, ಮೊದಲ ಗಂಡ ರಾಮ್ ವಸಂತ್ ನಾಯ್ಕ ಎಂಬುವರಿಂದ ನರೇಶ್ ಮತ್ತು ಹರೀಶ ಎಂಬ ಇಬ್ಬರು ಮಕ್ಕಳಿದ್ದಾರೆ.</p><p>ಮಾರನಗೆರೆ ಗ್ರಾಮದಲ್ಲಿ ಶೆಡ್ ಹಾಕಿಕೊಂಡು ವಾಸವಾಗಿದ್ದು ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ ಮತ್ತು ಯಶೋದ ನಡುವೆ ಜಗಳ ನಡೆದಿದೆ. ಆ ಸಮಯದಲ್ಲಿ ಹರೀಶ್ ಕೊಡಲಿಯಿಂದ ಹಲ್ಲೆ ಮಾಡಿ, ಕೊಲೆ ಮಾಡಿದ್ದಾನೆ.</p><p>ತಾವರೆಕೆರೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ (40) ಎಂಬುವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.</p><p>ನಿತಿನ್ ತುಳಸಿರಾಮ್ ಪತ್ನಿ ಯಶೋದ ಅವರ ಮೊದಲ ಗಂಡನ ಮಗ ಹರೀಶ್ ಕೊಲೆ ಮಾಡಿದ ಆರೋಪಿ.</p><p>ಮಹಾರಾಷ್ಟ್ರದಿಂದ ಬಂದು ಶಿರಾ ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ 3 ವರ್ಷದಿಂದ ಇದ್ದಿಲು ಸುಡುವ ಕೆಲಸ ಮಾಡಿಕೊಂಡಿದ್ದರು. </p><p>ನಿತಿನ್ ತುಳಸಿರಾಮ್ ಅವರು ಯಶೋದ ಅವರನ್ನು ಎರಡನೇ ಮದುವೆ ಮಾಡಕೊಂಡಿದ್ದರು. ಯಶೋದಗೆ ಸಹ ಇದು ಎರಡನೇ ಮದುವೆಯಾಗಿದ್ದು, ಮೊದಲ ಗಂಡ ರಾಮ್ ವಸಂತ್ ನಾಯ್ಕ ಎಂಬುವರಿಂದ ನರೇಶ್ ಮತ್ತು ಹರೀಶ ಎಂಬ ಇಬ್ಬರು ಮಕ್ಕಳಿದ್ದಾರೆ.</p><p>ಮಾರನಗೆರೆ ಗ್ರಾಮದಲ್ಲಿ ಶೆಡ್ ಹಾಕಿಕೊಂಡು ವಾಸವಾಗಿದ್ದು ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ ಮತ್ತು ಯಶೋದ ನಡುವೆ ಜಗಳ ನಡೆದಿದೆ. ಆ ಸಮಯದಲ್ಲಿ ಹರೀಶ್ ಕೊಡಲಿಯಿಂದ ಹಲ್ಲೆ ಮಾಡಿ, ಕೊಲೆ ಮಾಡಿದ್ದಾನೆ.</p><p>ತಾವರೆಕೆರೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>