ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಯೂರುದುರ್ಗ ಬಳಿ ಕ್ರೇನ್ ಡಿಕ್ಕಿ: ಬೈಕ್‌ನಲ್ಲಿದ್ದ ಹಿಂಬದಿ ಸವಾರ ಸಾವು

Last Updated 26 ಏಪ್ರಿಲ್ 2019, 10:52 IST
ಅಕ್ಷರ ಗಾತ್ರ

ಹುಲಿಯೂರುದುರ್ಗ: ಪಟ್ಟಣದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಶುಕ್ರವಾರ ಕ್ರೇನ್ ಡಿಕ್ಕಿ ಹೊಡೆದು ಬೈಕ್‌ನ ಹಿಂಬದಿ ಸವಾರ ಅರಮನೆ ಹೊನ್ನಮಾಚನಹಳ್ಳಿ ಗ್ರಾಮದ ಪಂಚಲಿಂಗ (35) ಮೃತಪಟ್ಟಿದ್ದಾರೆ.

ಬಂಡೀಹಳ್ಳಿಯ ತಿಮ್ಮೇಗೌಡ ಅವರ ಬೈಕ್‌ನಲ್ಲಿ ಕುಳಿತು ಸ್ವಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗುರುಳಿ ಬಿದ್ದಾಗ ಕ್ರೇನಿನ ಚಕ್ರಗಳು ಮೈಮೇಲೆ ಹರಿದಿವೆ. ಕ್ರೇನ್ ಪಟ್ಟಣದ ಆನಂದ್ ಎಂಬುವವರಿಗೆ ಸೇರಿದ್ದು ಎನ್ನಲಾಗಿದೆ.

ಈಚೆಗಷ್ಟೇ ಇದೇ ರಸ್ತೆಯಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಮೊಪೆಡ್ ಸವಾರ ಮೃತಪಟ್ಟಿದ್ದರು. ಇನ್ನೊಂದು ಪ್ರಕರಣದಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿರುವ ಬೈಕ್‌ ಸವಾರ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೈಪಾಸ್ ರಸ್ತೆಯಲ್ಲಿ ಮೇಲಿಂದ ಮೇಲೆ ಆಗುತ್ತಿರುವ ಅಪಘಾತಗಳ ಕುರಿತು ಜನರು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT