<p>ತುಮಕೂರು: ಕೋವಿಡ್–19 ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸುವ ಆಯುರ್ವೇದ ಔಷಧಿಗಳ ‘ಆಯುಷ್ ಕಿಟ್’ಅನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ‘ಗಿವ್ ಬ್ಯಾಕ್’ ಸಂಸ್ಥೆ ನೇತೃತ್ವದಲ್ಲಿ ವಿತರಿಸಿತು.</p>.<p>ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ರೋಗಗಳು ಯುವಜನರನ್ನು ಹೆಚ್ಚಾಗಿ ಬಾಧಿಸುತ್ತಿವೆ. ದುಶ್ಚಟಗಳು, ಕಲುಷಿತ ಆಹಾರ ಸೇವನೆಯಿಂದ ರೋಗಗಳು ಹೆಚ್ಚುತ್ತಿವೆ. ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕೋವಿಡ್ ಸಂಯೋಜಕ ಹಾಗೂ ತುಮಕೂರು ರೋಟರಿ ಸಿಟಿ ಕಾರ್ಯದರ್ಶಿ ಬಿ.ಆರ್.ಉಮೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಆಯುರ್ವೇದ ಪದವೀಧರರ ವೈದ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಪ್ರಕಾಶ್ ಪಾಲ್ತೈ, ‘ಆಯುರ್ವೇದ ಔಷಧಿಗಳನ್ನು 10ರಿಂದ 15 ದಿನಗಳ ಕಾಲ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಆಯುಷ್ ಕಿಟ್ನಲ್ಲಿರುವ ಅಶ್ವಗಂಧ, ಶುಂಠಿ, ಭೂಮಿ ಅಮಲಕಿ, ತುಳಸಿ ಸಸ್ಯಗಳು ವೈರಾಣು ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿವೆ’ ಎಂದು ವಿವರಿಸಿದರು.</p>.<p>ಗಿವ್ ಬ್ಯಾಕ್ ಸಂಸ್ಥೆಯ ರಕ್ಷಿತ್, ‘ಕೋವಿಡ್ ಕೇರ್ ಸೆಂಟರ್ಗಳಲ್ಲಿ ಆಯುರ್ವೇದ ಔಷಧಿ ಕಿಟ್ಗಳನ್ನು ಉಚಿತವಾಗಿ ನಮ್ಮ ಸಂಸ್ಥೆ ವತಿಯಿಂದ ನೀಡಲಾಗಿದೆ’ ಎಂದರು.</p>.<p>ಪ್ರಮುಖರಾದ ಕೆ.ಜಿ.ಶಿವಕುಮಾರ್, ಸಿ.ಆರ್.ನಟರಾಜು, ಪ್ಲಾಂಥಾಮಸ್ಸ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಕೋವಿಡ್–19 ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ವರ್ಧಿಸುವ ಆಯುರ್ವೇದ ಔಷಧಿಗಳ ‘ಆಯುಷ್ ಕಿಟ್’ಅನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆಯು ‘ಗಿವ್ ಬ್ಯಾಕ್’ ಸಂಸ್ಥೆ ನೇತೃತ್ವದಲ್ಲಿ ವಿತರಿಸಿತು.</p>.<p>ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ರೋಗಗಳು ಯುವಜನರನ್ನು ಹೆಚ್ಚಾಗಿ ಬಾಧಿಸುತ್ತಿವೆ. ದುಶ್ಚಟಗಳು, ಕಲುಷಿತ ಆಹಾರ ಸೇವನೆಯಿಂದ ರೋಗಗಳು ಹೆಚ್ಚುತ್ತಿವೆ. ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಕೋವಿಡ್ ಸಂಯೋಜಕ ಹಾಗೂ ತುಮಕೂರು ರೋಟರಿ ಸಿಟಿ ಕಾರ್ಯದರ್ಶಿ ಬಿ.ಆರ್.ಉಮೇಶ್ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಆಯುರ್ವೇದ ಪದವೀಧರರ ವೈದ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಪ್ರಕಾಶ್ ಪಾಲ್ತೈ, ‘ಆಯುರ್ವೇದ ಔಷಧಿಗಳನ್ನು 10ರಿಂದ 15 ದಿನಗಳ ಕಾಲ ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಆಯುಷ್ ಕಿಟ್ನಲ್ಲಿರುವ ಅಶ್ವಗಂಧ, ಶುಂಠಿ, ಭೂಮಿ ಅಮಲಕಿ, ತುಳಸಿ ಸಸ್ಯಗಳು ವೈರಾಣು ವಿರುದ್ಧ ಹೋರಾಡುವ ಗುಣಗಳನ್ನು ಹೊಂದಿವೆ’ ಎಂದು ವಿವರಿಸಿದರು.</p>.<p>ಗಿವ್ ಬ್ಯಾಕ್ ಸಂಸ್ಥೆಯ ರಕ್ಷಿತ್, ‘ಕೋವಿಡ್ ಕೇರ್ ಸೆಂಟರ್ಗಳಲ್ಲಿ ಆಯುರ್ವೇದ ಔಷಧಿ ಕಿಟ್ಗಳನ್ನು ಉಚಿತವಾಗಿ ನಮ್ಮ ಸಂಸ್ಥೆ ವತಿಯಿಂದ ನೀಡಲಾಗಿದೆ’ ಎಂದರು.</p>.<p>ಪ್ರಮುಖರಾದ ಕೆ.ಜಿ.ಶಿವಕುಮಾರ್, ಸಿ.ಆರ್.ನಟರಾಜು, ಪ್ಲಾಂಥಾಮಸ್ಸ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>