<p><strong>ತುಮಕೂರು:</strong> ಅಯ್ಯಪ್ಪಸ್ವಾಮಿ ಭಕ್ತರಾದವರು ವ್ಯಸನ ಮುಕ್ತರಾಗಬೇಕು ಎಂದು ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಕೆ.ಆರ್.ಬಡಾವಣೆ ಬಿದಿರುಮಳೆ ತೋಟದ ರಸ್ತೆಯಲ್ಲಿರುವ ಮಣಿಕಂಠಸ್ವಾಮಿ ಚಾರಿಟೆಬಲ್ ಟ್ರಸ್ಟ್ನ ಅಯ್ಯಪ್ಪಸ್ವಾಮಿ ದೇವಾಲಯದ 27ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನಮ್ಮ ಸಂಸ್ಕೃತಿಯಲ್ಲಿ ಅಯ್ಯಪ್ಪಸ್ವಾಮಿ ಭಕ್ತರು ಸೇರಿದಂತೆ ಪ್ರತಿಯೊಬ್ಬರೂ ತಂದೆ-ತಾಯಿ, ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಯಾವುದೇ ಕಾರಣಕ್ಕೂ ಹೆತ್ತವರನ್ನು ಗೋಳಾಡಿಸದೆ ನೋಡಿಕೊಳ್ಳಬೇಕು. ಅಯ್ಯಪ್ಪಸ್ವಾಮಿ ದೀಕ್ಷೆ ಪಡೆದ ಅವಧಿಯಲ್ಲಿ ರೂಢಿಸಿಕೊಳ್ಳುವ ಆಚಾರ, ವಿಚಾರಗಳನ್ನು ಬದುಕಿನುದ್ದಕ್ಕೂ ನಿರಂತರವಾಗಿ ಪಾಲಿಸಬೇಕು. ಎಂದಿಗೂ ದಾರಿ ತಪ್ಪಬಾರದು ಎಂದು ಹೇಳಿದರು.</p>.<p>ಅಯ್ಯಪ್ಪಸ್ವಾಮಿ ದೇವಾಲಯದ ಟಿ.ಎ.ಸುಧೀರ್, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಅಯ್ಯಪ್ಪಸ್ವಾಮಿ ಭಕ್ತರಾದವರು ವ್ಯಸನ ಮುಕ್ತರಾಗಬೇಕು ಎಂದು ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.</p>.<p>ನಗರದ ಕೆ.ಆರ್.ಬಡಾವಣೆ ಬಿದಿರುಮಳೆ ತೋಟದ ರಸ್ತೆಯಲ್ಲಿರುವ ಮಣಿಕಂಠಸ್ವಾಮಿ ಚಾರಿಟೆಬಲ್ ಟ್ರಸ್ಟ್ನ ಅಯ್ಯಪ್ಪಸ್ವಾಮಿ ದೇವಾಲಯದ 27ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ನಮ್ಮ ಸಂಸ್ಕೃತಿಯಲ್ಲಿ ಅಯ್ಯಪ್ಪಸ್ವಾಮಿ ಭಕ್ತರು ಸೇರಿದಂತೆ ಪ್ರತಿಯೊಬ್ಬರೂ ತಂದೆ-ತಾಯಿ, ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ಯಾವುದೇ ಕಾರಣಕ್ಕೂ ಹೆತ್ತವರನ್ನು ಗೋಳಾಡಿಸದೆ ನೋಡಿಕೊಳ್ಳಬೇಕು. ಅಯ್ಯಪ್ಪಸ್ವಾಮಿ ದೀಕ್ಷೆ ಪಡೆದ ಅವಧಿಯಲ್ಲಿ ರೂಢಿಸಿಕೊಳ್ಳುವ ಆಚಾರ, ವಿಚಾರಗಳನ್ನು ಬದುಕಿನುದ್ದಕ್ಕೂ ನಿರಂತರವಾಗಿ ಪಾಲಿಸಬೇಕು. ಎಂದಿಗೂ ದಾರಿ ತಪ್ಪಬಾರದು ಎಂದು ಹೇಳಿದರು.</p>.<p>ಅಯ್ಯಪ್ಪಸ್ವಾಮಿ ದೇವಾಲಯದ ಟಿ.ಎ.ಸುಧೀರ್, ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>