ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಶಾಸಕ ಕೆ.ಷಡಕ್ಷರಿ ಬೇರೆಡೆಗೆ ಸಿಎ ಸೈಟ್ ನೀಡಿ ₹5 ಲಕ್ಷವನ್ನು ಶಾಸಕರ ನಿಧಿಯಿಂದ ಮಂಜೂರು ಮಾಡಿಕೊಡುವ ಭರವಸೆ ನೀಡಿದ್ದಾರೆ. ಆದರೆ ಲೋಕೇಶ್ವರ ವೈಯಕ್ತಿಕ ಹಿತಾಸಕ್ತಿ, ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು.