ವಲಸಿಗರಿಗೂ ಆದ್ಯತೆ ಕೊಡಬೇಕು– ಈಶ್ವರಪ್ಪ (ಹುಬ್ಬಳ್ಳಿ ವರದಿ): ‘ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲವರಿಗೆ ಬೇಸರವಾಗುವುದು ಸಹಜ. ಆದರೆ, ಕಾಂಗ್ರೆಸ್– ಜೆಡಿಎಸ್ನಿಂದ ಬರುವವರಿಗೂ ಸೂಕ್ತ ಸ್ಥಾನಮಾನ ನೀಡಬೇಕಾಗುತ್ತದೆ. ಹಾಗಾಗಿ, ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ವಿಸ್ತರಿಸಲಾಗಿದೆ’ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.