<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ ಶಾಸಕ ಡಾ.ರಂಗನಾಥ್, ಬಗರ್ ಹುಕುಂ ಸಾಗುವಳಿ ಸಮಿತಿ ಮತ್ತು ತಹಶೀಲ್ದಾರ್ ಅವರ ನಿರ್ಲಕ್ಷ್ಯದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಅನ್ಯಾಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರೈತ ಘಟಕದ ಅಧ್ಯಕ್ಷ ಕರಿಗೌಡ ಬೀಚನಹಳ್ಳಿ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದ ಪಕ್ಷದ ಬೆಂಬಲಿಗರ ನಾಮಿನಿ ಸಮಿತಿ ರಚನೆಯಾಗಿದ್ದರೂ ಶಾಸಕ ರಂಗನಾಥ್, ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯ ರೊಂದಿಗೆ ಸಮನ್ವಯತೆ ಕೊರತೆಯಿಂದ ಸಭೆಗಳನ್ನು ನಡೆಸದೆ ಕಾಲಹರಣ ಮಾಡಿದ್ದಾರೆ ಎಂದು ಹೇಳಿದರು.</p>.<p>ಅಧಿಕಾರಾವಧಿ ಮುಗಿಯುತ್ತಿರುವ ಸಮಯದಲ್ಲಿ ಬಿಜೆಪಿ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಇದರ ಪರಿಣಾಮ ಸಾಗುವಳಿ ಚೀಟಿ ವಿತರಣೆಯೂ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದು ದೂರಿದರು.</p>.<p>ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದಾಗ ಅರಣ್ಯ ಇಲಾಖೆಯೊಂದಿಗೆ ಜಂಟಿ ಸರ್ವೆ ಮಾಡಲು ಆದೇಶ ನೀಡಿದ್ದರು. ಆದರೆ, ತಹಶೀಲ್ದಾರ್ ನಿರ್ಲಕ್ಷ್ಯ ತೋರಿದ ಪರಿಣಾಮ ರೈತರಿಗೆ ಅನ್ಯಾಯವಾಗಿದೆ ಎಂದು<br />ಟೀಕಿಸಿದರು.</p>.<p>ಪಕ್ಷದ ಅಭ್ಯರ್ಥಿ ಎಚ್.ಎ. ಜಯ ರಾಮಯ್ಯ, ತಾಲ್ಲೂಕಿನಲ್ಲಿ ಹೇಮಾ ವತಿ ನಾಲಾ ಯೋಜನೆಯು ಅಧಿಕಾರಿ ಗಳು, ಜನಪ್ರತಿನಿಧಿಗಳ ಮತ್ತು ಗುತ್ತಿಗೆದಾರರ ಜೇಬು ತುಂಬುವ ಯೋಜನೆಯಾಗಿದೆ. ನಾಲೆಗಾಗಿ ಜಮೀನು ಕಳೆದುಕೊಂಡಿ ರುವ ಬಹುತೇಕ ರೈತರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು<br />ದೂರಿದರು.</p>.<p>ನೀರಿನ ಆಸೆಗಾಗಿ ಜಮೀನು ಕಳೆದುಕೊಂಡವರಿಗೆ ಈ ಕಡೆ ನೀರು ಇಲ್ಲ, ಮತ್ತೊಂದೆಡೆ ಪರಿಹಾರವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಶ್ರೀರಂಗ ಏತ ನೀರಾವರಿಗೆ ಜಮೀನು ಕಳೆದುಕೊಂಡವರಿಗೆ ₹ 10 ಕೋಟಿ ಪರಿಹಾರ ಧನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಪದಾಧಿಕಾರಿಗಳಾದ ಶಿವಲಿಂಗಯ್ಯ, ಗಿರೀಶ್, ಕುಮಾರ್, ರಾಜಣ್ಣ, ಪುನೀತ್ ಗೌಡ, ಮಹೇಶ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನಲ್ಲಿ ಶಾಸಕ ಡಾ.ರಂಗನಾಥ್, ಬಗರ್ ಹುಕುಂ ಸಾಗುವಳಿ ಸಮಿತಿ ಮತ್ತು ತಹಶೀಲ್ದಾರ್ ಅವರ ನಿರ್ಲಕ್ಷ್ಯದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಅನ್ಯಾಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರೈತ ಘಟಕದ ಅಧ್ಯಕ್ಷ ಕರಿಗೌಡ ಬೀಚನಹಳ್ಳಿ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಿಂದ ಪಕ್ಷದ ಬೆಂಬಲಿಗರ ನಾಮಿನಿ ಸಮಿತಿ ರಚನೆಯಾಗಿದ್ದರೂ ಶಾಸಕ ರಂಗನಾಥ್, ಅಧಿಕಾರಿಗಳು ಮತ್ತು ಸಮಿತಿಯ ಸದಸ್ಯ ರೊಂದಿಗೆ ಸಮನ್ವಯತೆ ಕೊರತೆಯಿಂದ ಸಭೆಗಳನ್ನು ನಡೆಸದೆ ಕಾಲಹರಣ ಮಾಡಿದ್ದಾರೆ ಎಂದು ಹೇಳಿದರು.</p>.<p>ಅಧಿಕಾರಾವಧಿ ಮುಗಿಯುತ್ತಿರುವ ಸಮಯದಲ್ಲಿ ಬಿಜೆಪಿ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಇದರ ಪರಿಣಾಮ ಸಾಗುವಳಿ ಚೀಟಿ ವಿತರಣೆಯೂ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂದು ದೂರಿದರು.</p>.<p>ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದಾಗ ಅರಣ್ಯ ಇಲಾಖೆಯೊಂದಿಗೆ ಜಂಟಿ ಸರ್ವೆ ಮಾಡಲು ಆದೇಶ ನೀಡಿದ್ದರು. ಆದರೆ, ತಹಶೀಲ್ದಾರ್ ನಿರ್ಲಕ್ಷ್ಯ ತೋರಿದ ಪರಿಣಾಮ ರೈತರಿಗೆ ಅನ್ಯಾಯವಾಗಿದೆ ಎಂದು<br />ಟೀಕಿಸಿದರು.</p>.<p>ಪಕ್ಷದ ಅಭ್ಯರ್ಥಿ ಎಚ್.ಎ. ಜಯ ರಾಮಯ್ಯ, ತಾಲ್ಲೂಕಿನಲ್ಲಿ ಹೇಮಾ ವತಿ ನಾಲಾ ಯೋಜನೆಯು ಅಧಿಕಾರಿ ಗಳು, ಜನಪ್ರತಿನಿಧಿಗಳ ಮತ್ತು ಗುತ್ತಿಗೆದಾರರ ಜೇಬು ತುಂಬುವ ಯೋಜನೆಯಾಗಿದೆ. ನಾಲೆಗಾಗಿ ಜಮೀನು ಕಳೆದುಕೊಂಡಿ ರುವ ಬಹುತೇಕ ರೈತರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು<br />ದೂರಿದರು.</p>.<p>ನೀರಿನ ಆಸೆಗಾಗಿ ಜಮೀನು ಕಳೆದುಕೊಂಡವರಿಗೆ ಈ ಕಡೆ ನೀರು ಇಲ್ಲ, ಮತ್ತೊಂದೆಡೆ ಪರಿಹಾರವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಶ್ರೀರಂಗ ಏತ ನೀರಾವರಿಗೆ ಜಮೀನು ಕಳೆದುಕೊಂಡವರಿಗೆ ₹ 10 ಕೋಟಿ ಪರಿಹಾರ ಧನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಪಕ್ಷದ ಪದಾಧಿಕಾರಿಗಳಾದ ಶಿವಲಿಂಗಯ್ಯ, ಗಿರೀಶ್, ಕುಮಾರ್, ರಾಜಣ್ಣ, ಪುನೀತ್ ಗೌಡ, ಮಹೇಶ್<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>