<p><strong>ತುಮಕೂರು:</strong> ಗ್ರಾಮಾಂತರ ಕ್ಷೇತ್ರದ ಮಲ್ಲಸಂದ್ರ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಶಾಸಕ ಡಿ.ಸಿ.ಗೌರಿಶಂಕರ್ 3 ಸಾವಿರ ಮಹಿಳೆಯರಿಗೆ ಬಾಗಿನ, 1 ಲಾರಿ ಕಬ್ಬು ಹಾಗು ಎಳ್ಳು ಬೆಲ್ಲ ವಿತರಿಸಿ ಶುಭಕೋರಿದರು.</p>.<p>ತಾಲ್ಲೂಕಿನ ಮಲ್ಲಸಂದ್ರದಲ್ಲಿ ಗ್ರಾಮಾಂತರ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮಾಂತರ ಕ್ಷೇತ್ರದ ಮಹಿಳೆಯರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಾಗಿನ ವಿತರಿಸಿ ಅವರು ಮಾತನಾಡಿದರು.</p>.<p>ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜಕಾರಣದಲ್ಲಿ ನನಗೆ ಅಧಿಕಾರ ಇರಲಿ ಬಿಡಲಿ, ನಾನು ಬದುಕಿರುವವರೆಗೂ ಗ್ರಾಮಾಂತರ ಕ್ಷೇತ್ರದಲ್ಲಿನ ಹೆಣ್ಣು ಮಕ್ಕಳಿಗೆ ಬಾಗಿನ ನೀಡುತ್ತೇನೆ. ಅಧಿಕಾರ ನೀಡಿದವರಿಗೆ ಕೆಟ್ಟ ಹೆಸರು ತರದಂತೆ ಕೆಲಸ ಮಾಡುತ್ತೇನೆ ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆಯಿಂದ ಗ್ರಾಮಾಂತರ ಕ್ಷೇತ್ರಕ್ಕೆ ಮಂಜೂರಾಗಿದ್ದ ಒಂದು ₹1 ಕೋಟಿ ಅನುದಾನವನ್ನು ನಗರ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದ ಬಿಜೆಪಿಯವರು ಮಾಡುತ್ತಿರುವುದು ಏನು? ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣ ಸರಿಯಲ್ಲ ಎಂದು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಅಸಲಿಯಾಗಿದೆ. ತಪ್ಪು ಮಾಡಿರುವ ಬಿಜೆಪಿ ಅಧಿಕಾರ ದರ್ಪದಿಂದ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ, ಇನ್ನು ಅನೇಕ ಸಿಡಿಗಳು ಹೊರಗೆ ಬರುತ್ತವೆ ಎಂದು ಎಚ್ಚರಿಸಿದರು.</p>.<p>ತುಮಕೂರು ಗ್ರಾಮಾಂತರ ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ, ಪ್ರಮುಖರಾದ ಗೂಳೂರು ಪುಟ್ಟರಾಜು, ವೈ.ಟಿ.ನಾಗರಾಜು, ಹಿರೇಹಳ್ಳಿ ಮಹೇಶ್, ಸುವರ್ಣಾ ಗಿರಿಕುಮಾರ್, ಪಾಲನೇತ್ರಯ್ಯ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಗ್ರಾಮಾಂತರ ಕ್ಷೇತ್ರದ ಮಲ್ಲಸಂದ್ರ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಶಾಸಕ ಡಿ.ಸಿ.ಗೌರಿಶಂಕರ್ 3 ಸಾವಿರ ಮಹಿಳೆಯರಿಗೆ ಬಾಗಿನ, 1 ಲಾರಿ ಕಬ್ಬು ಹಾಗು ಎಳ್ಳು ಬೆಲ್ಲ ವಿತರಿಸಿ ಶುಭಕೋರಿದರು.</p>.<p>ತಾಲ್ಲೂಕಿನ ಮಲ್ಲಸಂದ್ರದಲ್ಲಿ ಗ್ರಾಮಾಂತರ ಜೆಡಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮಾಂತರ ಕ್ಷೇತ್ರದ ಮಹಿಳೆಯರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಾಗಿನ ವಿತರಿಸಿ ಅವರು ಮಾತನಾಡಿದರು.</p>.<p>ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ರಾಜಕಾರಣದಲ್ಲಿ ನನಗೆ ಅಧಿಕಾರ ಇರಲಿ ಬಿಡಲಿ, ನಾನು ಬದುಕಿರುವವರೆಗೂ ಗ್ರಾಮಾಂತರ ಕ್ಷೇತ್ರದಲ್ಲಿನ ಹೆಣ್ಣು ಮಕ್ಕಳಿಗೆ ಬಾಗಿನ ನೀಡುತ್ತೇನೆ. ಅಧಿಕಾರ ನೀಡಿದವರಿಗೆ ಕೆಟ್ಟ ಹೆಸರು ತರದಂತೆ ಕೆಲಸ ಮಾಡುತ್ತೇನೆ ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆಯಿಂದ ಗ್ರಾಮಾಂತರ ಕ್ಷೇತ್ರಕ್ಕೆ ಮಂಜೂರಾಗಿದ್ದ ಒಂದು ₹1 ಕೋಟಿ ಅನುದಾನವನ್ನು ನಗರ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದ ಬಿಜೆಪಿಯವರು ಮಾಡುತ್ತಿರುವುದು ಏನು? ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣ ಸರಿಯಲ್ಲ ಎಂದು ಹೇಳಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋ ಅಸಲಿಯಾಗಿದೆ. ತಪ್ಪು ಮಾಡಿರುವ ಬಿಜೆಪಿ ಅಧಿಕಾರ ದರ್ಪದಿಂದ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ, ಇನ್ನು ಅನೇಕ ಸಿಡಿಗಳು ಹೊರಗೆ ಬರುತ್ತವೆ ಎಂದು ಎಚ್ಚರಿಸಿದರು.</p>.<p>ತುಮಕೂರು ಗ್ರಾಮಾಂತರ ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೌರಮ್ಮ, ಪ್ರಮುಖರಾದ ಗೂಳೂರು ಪುಟ್ಟರಾಜು, ವೈ.ಟಿ.ನಾಗರಾಜು, ಹಿರೇಹಳ್ಳಿ ಮಹೇಶ್, ಸುವರ್ಣಾ ಗಿರಿಕುಮಾರ್, ಪಾಲನೇತ್ರಯ್ಯ ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>