<p><strong>ತುಮಕೂರು: </strong>ಕೊರೊನಾ ತಡೆಯ ಕಟ್ಟುನಿಟ್ಟಿನ ಮಾರ್ಗಸೂಚಿಗಳ ನಡುವೆ ಜಿಲ್ಲೆಯಲ್ಲಿ ಶನಿವಾರ ಬಕ್ರೀದ್ ಆಚರಣೆ ಸರಳವಾಗಿ ನಡೆಯಿತು.</p>.<p>ಮುಸ್ಲಿಮರು ಮನೆಗಳಲ್ಲಿ ಸಡಗರ ಮನೆ ಮಾಡಿತ್ತು. ಈ ಹಿಂದಿನ ವರ್ಷಗಳಂತೆ ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ. ಹೆಚ್ಚಿನ ಜನರು ಬಂದರೂ ಒಮ್ಮೆ 50 ಜನರ ತಂಡ ಪ್ರಾರ್ಥನೆ ಸಲ್ಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ತಂಡ ತಂಡಗಳಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಮನೆಗಳಲ್ಲಿ ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ಸಂಭ್ರಮಿಸಿದರು. ನಾನಾ ಬಗೆಯ ಖಾದ್ಯಗಳನ್ನು ತಯಾರಿಸಿ ಸವಿದರು. ಬಹಿರಂಗ ಆಚರಣೆಗಳು ಕಡಿಮೆಯಾಗಿದ್ದು ಮನೆಗಳಿಗೆ ಆಚರಣೆಗಳು ಸೀಮಿತವಾಗಿದ್ದವು. ಮಸೀದಿಗೆ ಬಂದಿದ್ದ ಬಹುತೇಕ ಪರಸ್ಪರ ಆಲಿಂಗನಕ್ಕೆ ಮುಂದಾಗದೆ ಶುಭಾಶಯವಿನಿಮಯ ಮಾಡಿಕೊಂಡರು.</p>.<p>ಬಾರ್ಲೈನ್ ರಸ್ತೆಯಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಜಿ ಶಾಸಕ ಷಫಿ ಅಹಮದ್, ‘ಕೊರೊನಾ ತಡೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಅನ್ವಯ ನಾವು ಹಬ್ಬವನ್ನು ಮಾಡುತ್ತಿದ್ದೇವೆ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಾಗ ಮಾಸ್ಕ್ ಧರಿಸಿ ಅಂತರ ಕಾಯ್ದುಕೊಳ್ಳುತ್ತಿದ್ದೇವೆ’ ಎಂದರು.</p>.<p>ಕೊರೊನಾ ಸೋಂಕು ತೊಲಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಹಬ್ಬ ಆಚರಿಸಲಾಗಿದೆ ಎಂದು ಹೇಳಿದರು.</p>.<p>ಯಾರಬ್ ನಗರ, ಪಿ.ಎಚ್.ಕಾಲೊನಿ, ಎನ್.ಆರ್.ಕಾಲೊನಿ ಹೀಗೆ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಲ್ಲಿಯೂ ಪ್ರಾರ್ಥನೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕೊರೊನಾ ತಡೆಯ ಕಟ್ಟುನಿಟ್ಟಿನ ಮಾರ್ಗಸೂಚಿಗಳ ನಡುವೆ ಜಿಲ್ಲೆಯಲ್ಲಿ ಶನಿವಾರ ಬಕ್ರೀದ್ ಆಚರಣೆ ಸರಳವಾಗಿ ನಡೆಯಿತು.</p>.<p>ಮುಸ್ಲಿಮರು ಮನೆಗಳಲ್ಲಿ ಸಡಗರ ಮನೆ ಮಾಡಿತ್ತು. ಈ ಹಿಂದಿನ ವರ್ಷಗಳಂತೆ ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲಿಲ್ಲ. ಹೆಚ್ಚಿನ ಜನರು ಬಂದರೂ ಒಮ್ಮೆ 50 ಜನರ ತಂಡ ಪ್ರಾರ್ಥನೆ ಸಲ್ಲಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ತಂಡ ತಂಡಗಳಾಗಿ ಪ್ರಾರ್ಥನೆ ಸಲ್ಲಿಸಿದರು.</p>.<p>ಮನೆಗಳಲ್ಲಿ ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ಸಂಭ್ರಮಿಸಿದರು. ನಾನಾ ಬಗೆಯ ಖಾದ್ಯಗಳನ್ನು ತಯಾರಿಸಿ ಸವಿದರು. ಬಹಿರಂಗ ಆಚರಣೆಗಳು ಕಡಿಮೆಯಾಗಿದ್ದು ಮನೆಗಳಿಗೆ ಆಚರಣೆಗಳು ಸೀಮಿತವಾಗಿದ್ದವು. ಮಸೀದಿಗೆ ಬಂದಿದ್ದ ಬಹುತೇಕ ಪರಸ್ಪರ ಆಲಿಂಗನಕ್ಕೆ ಮುಂದಾಗದೆ ಶುಭಾಶಯವಿನಿಮಯ ಮಾಡಿಕೊಂಡರು.</p>.<p>ಬಾರ್ಲೈನ್ ರಸ್ತೆಯಲ್ಲಿರುವ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಮಾಜಿ ಶಾಸಕ ಷಫಿ ಅಹಮದ್, ‘ಕೊರೊನಾ ತಡೆಗೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಅನ್ವಯ ನಾವು ಹಬ್ಬವನ್ನು ಮಾಡುತ್ತಿದ್ದೇವೆ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಾಗ ಮಾಸ್ಕ್ ಧರಿಸಿ ಅಂತರ ಕಾಯ್ದುಕೊಳ್ಳುತ್ತಿದ್ದೇವೆ’ ಎಂದರು.</p>.<p>ಕೊರೊನಾ ಸೋಂಕು ತೊಲಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಹಬ್ಬ ಆಚರಿಸಲಾಗಿದೆ ಎಂದು ಹೇಳಿದರು.</p>.<p>ಯಾರಬ್ ನಗರ, ಪಿ.ಎಚ್.ಕಾಲೊನಿ, ಎನ್.ಆರ್.ಕಾಲೊನಿ ಹೀಗೆ ವಿವಿಧ ಬಡಾವಣೆಗಳಲ್ಲಿರುವ ಮಸೀದಿಗಳಲ್ಲಿಯೂ ಪ್ರಾರ್ಥನೆಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>