ಎಸ್ಯುಸಿಐ ಜಿಲ್ಲಾ ಕಾರ್ಯದರ್ಶಿ ಎಸ್.ಎನ್.ಸ್ವಾಮಿ ಚಳವಳಿಗೆ ಚಾಲನೆ ನೀಡಿ ಮಾತನಾಡಿ, ‘ಶಿಕ್ಷಣ, ಆರೋಗ್ಯ, ಜೀವನ ಭದ್ರತೆ ಒದಗಿಸುವುದು ಸರ್ಕಾರದ ಕನಿಷ್ಠ ಜವಾಬ್ದಾರಿ. ಪ್ರಸ್ತುತ ಸರ್ಕಾರಗಳು ಎಲ್ಲ ಸೇವಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುತ್ತಾ, ಜನರ ಜೀವನವನ್ನು ಮತ್ತಷ್ಟು ದುಸ್ತರಗೊಳಿಸಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.