<p><strong>ತುಮಕೂರು</strong>: ಬ್ಯಾಂಕ್ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಜಿಲ್ಲಾ ಸಮಿತಿ ಹಾಗೂ ಬ್ಯಾಂಕ್ ನಿವೃತ್ತರ ಸಂಘಟನೆಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದರು.</p>.<p>ಬ್ಯಾಂಕ್ ನೌಕರರ ಪಿಂಚಣಿಯನ್ನು 1995ರಿಂದ ಪರಿಷ್ಕರಿಸಿಲ್ಲ. ಆರ್ಬಿಐ ನೌಕರರ ಪಿಂಚಣಿಯನ್ನು ಮೂರು ಬಾರಿ ಪರಿಷ್ಕರಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿಯನ್ನು ಹತ್ತು ವರ್ಷಗಳಿಗೆ ಒಮ್ಮೆ ಪರಿಷ್ಕರಿಸಲಾಗುತ್ತದೆ. ಆದರೆ ನಮ್ಮ ಪಿಂಚಣಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬ್ಯಾಂಕ್ ಉದ್ಯೋಗಿಗಳ ಪಿಂಚಣಿ ನಿಧಿಯಲ್ಲಿ ₹4 ಲಕ್ಷ ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಇಷ್ಟು ದೊಡ್ಡ ಮೊತ್ತ ಸಂಗ್ರಹವಾಗಲು ಬ್ಯಾಂಕ್ ನೌಕರರು ಕೊಡುಗೆ ನೀಡಿದ್ದಾರೆ. ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಂಡು, ಸೇವೆಯಲ್ಲಿರುವ ಬ್ಯಾಂಕ್ ಉದ್ಯೋಗಿಗಳು ಪ್ರತಿ ತಿಂಗಳೂ ಈ ನಿಧಿಗೆ ಕೊಡುಗೆ ನೀಡುತ್ತಿದ್ದಾರೆ. ಜತೆಗೆ ಬ್ಯಾಂಕ್ಗಳು ಸಹ ಸಮಾನ ಮೊತ್ತ ನೀಡುತ್ತಿವೆ. ಆದರೂ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು.</p>.<p>ಬ್ಯಾಂಕ್ ನಿವೃತ್ತ ನೌಕರರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಮೇಶ್, ಜಿಲ್ಲಾ ಕಾರ್ಯದರ್ಶಿ ಎನ್.ಜಿ.ಮಹಲಿಂಗಪ್ಪ, ಸಂಘಟನೆ ಪ್ರಮುಖರಾದ ಕೆ.ವಿಶ್ವನಾಥನಾಯಕ್, ಸಿ.ಎನ್.ಪ್ರಸಾದ್, ನಟರಾಜು, ಜಾನಕಿರಾಮ್, ಬ್ರಹ್ಮರಾಯಪ್ಪ, ಧನಲಕ್ಷ್ಮಿ ಬಾಯಿ ಮೊದಲಾದವರು ಪಾಲ್ಗೊಂಡಿದ್ದರು.</p>.<p><strong>ಪ್ರಮುಖ ಬೇಡಿಕೆಗಳು</strong></p><p> * ಪಿಂಚಣಿ ಪರಿಷ್ಕರಣೆ ಮಾಡಬೇಕು</p><p>* ಖಾಸಗಿ ಬ್ಯಾಂಕ್ ನಿವೃತ್ತ ನೌಕರರಿಗೆ ಎಕ್ಸ್ಗ್ರೇಷಿಯಾ ಪಾವತಿಸಬೇಕು </p><p>* ಎಲ್ಲ ನಿವೃತ್ತ ನೌಕರರಿಗೆ ಬ್ಯಾಂಕ್ಗಳಿಂದಲೇ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು</p><p> * ಐಬಿಎ ವತಿಯಿಂದ ನಿವೃತ್ತ ನೌಕರರ ಸಂಘಟನೆ ಜತೆ ಚರ್ಚೆ ನಡೆಸಬೇಕು</p><p> * ವಿಶೇಷ ಭತ್ಯೆಯ ಮೇಲೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು</p><p> * ರಾಜೀನಾಮೆ ನೀಡಿದವರಿಗೂ ಪಿಂಚಣಿ ಸೌಲಭ್ಯ ವಿಸ್ತರಿಸಬೇಕು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಬ್ಯಾಂಕ್ ನಿವೃತ್ತ ನೌಕರರ ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಒಕ್ಕೂಟದ ಜಿಲ್ಲಾ ಸಮಿತಿ ಹಾಗೂ ಬ್ಯಾಂಕ್ ನಿವೃತ್ತರ ಸಂಘಟನೆಗಳ ಸಂಯುಕ್ತ ವೇದಿಕೆ ನೇತೃತ್ವದಲ್ಲಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದರು.</p>.<p>ಬ್ಯಾಂಕ್ ನೌಕರರ ಪಿಂಚಣಿಯನ್ನು 1995ರಿಂದ ಪರಿಷ್ಕರಿಸಿಲ್ಲ. ಆರ್ಬಿಐ ನೌಕರರ ಪಿಂಚಣಿಯನ್ನು ಮೂರು ಬಾರಿ ಪರಿಷ್ಕರಿಸಲಾಗಿದೆ. ಕೇಂದ್ರ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿಯನ್ನು ಹತ್ತು ವರ್ಷಗಳಿಗೆ ಒಮ್ಮೆ ಪರಿಷ್ಕರಿಸಲಾಗುತ್ತದೆ. ಆದರೆ ನಮ್ಮ ಪಿಂಚಣಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಬ್ಯಾಂಕ್ ಉದ್ಯೋಗಿಗಳ ಪಿಂಚಣಿ ನಿಧಿಯಲ್ಲಿ ₹4 ಲಕ್ಷ ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಇಷ್ಟು ದೊಡ್ಡ ಮೊತ್ತ ಸಂಗ್ರಹವಾಗಲು ಬ್ಯಾಂಕ್ ನೌಕರರು ಕೊಡುಗೆ ನೀಡಿದ್ದಾರೆ. ಪಿಂಚಣಿ ಯೋಜನೆ ಆಯ್ಕೆ ಮಾಡಿಕೊಂಡು, ಸೇವೆಯಲ್ಲಿರುವ ಬ್ಯಾಂಕ್ ಉದ್ಯೋಗಿಗಳು ಪ್ರತಿ ತಿಂಗಳೂ ಈ ನಿಧಿಗೆ ಕೊಡುಗೆ ನೀಡುತ್ತಿದ್ದಾರೆ. ಜತೆಗೆ ಬ್ಯಾಂಕ್ಗಳು ಸಹ ಸಮಾನ ಮೊತ್ತ ನೀಡುತ್ತಿವೆ. ಆದರೂ ನಿವೃತ್ತರ ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು.</p>.<p>ಬ್ಯಾಂಕ್ ನಿವೃತ್ತ ನೌಕರರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎನ್.ರಮೇಶ್, ಜಿಲ್ಲಾ ಕಾರ್ಯದರ್ಶಿ ಎನ್.ಜಿ.ಮಹಲಿಂಗಪ್ಪ, ಸಂಘಟನೆ ಪ್ರಮುಖರಾದ ಕೆ.ವಿಶ್ವನಾಥನಾಯಕ್, ಸಿ.ಎನ್.ಪ್ರಸಾದ್, ನಟರಾಜು, ಜಾನಕಿರಾಮ್, ಬ್ರಹ್ಮರಾಯಪ್ಪ, ಧನಲಕ್ಷ್ಮಿ ಬಾಯಿ ಮೊದಲಾದವರು ಪಾಲ್ಗೊಂಡಿದ್ದರು.</p>.<p><strong>ಪ್ರಮುಖ ಬೇಡಿಕೆಗಳು</strong></p><p> * ಪಿಂಚಣಿ ಪರಿಷ್ಕರಣೆ ಮಾಡಬೇಕು</p><p>* ಖಾಸಗಿ ಬ್ಯಾಂಕ್ ನಿವೃತ್ತ ನೌಕರರಿಗೆ ಎಕ್ಸ್ಗ್ರೇಷಿಯಾ ಪಾವತಿಸಬೇಕು </p><p>* ಎಲ್ಲ ನಿವೃತ್ತ ನೌಕರರಿಗೆ ಬ್ಯಾಂಕ್ಗಳಿಂದಲೇ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕು</p><p> * ಐಬಿಎ ವತಿಯಿಂದ ನಿವೃತ್ತ ನೌಕರರ ಸಂಘಟನೆ ಜತೆ ಚರ್ಚೆ ನಡೆಸಬೇಕು</p><p> * ವಿಶೇಷ ಭತ್ಯೆಯ ಮೇಲೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು</p><p> * ರಾಜೀನಾಮೆ ನೀಡಿದವರಿಗೂ ಪಿಂಚಣಿ ಸೌಲಭ್ಯ ವಿಸ್ತರಿಸಬೇಕು </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>