<p><strong>ತುಮಕೂರು:</strong> ಜನರಿಗೆ ತೊಂದರೆ ಆಗದಂತೆ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜುಅಧಿಕಾರಿಗಳಿಗೆ ಸೂಚಿಸಿದರು.</p>.<p>ಸ್ಮಾರ್ಟ್ ಸಿಟಿ ಲಿಮಿಟೆಡ್ನಿಂದ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದರು.</p>.<p>ಬೇಸಿಗೆ ಮುಗಿಯುವಷ್ಟರಲ್ಲಿ ಬಹುತೇಕ ಕಾಮಗಾರಿಗಳನ್ನು ಮುಗಿಸಬೇಕು. ಮಳೆಗಾಲ ಶುರುವಾದ ಬಳಿಕ ಅಡಚಣೆಗಳು ಹೆಚ್ಚುತ್ತವೆ ಎಂದರು.</p>.<p>ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸುವಾಗ, ‘ಕೆಲಸ ಯಾವಾಗ ಮುಗಿಯುತ್ತದೆ’ ಎಂದು ಕೇಳಿದರು. ಆಗ ಗುತ್ತಿಗೆದಾರ ‘ಸೆಪ್ಟೆಂಬರ್ನಲ್ಲಿ ಮುಗಿಯುತ್ತದೆ ಸರ್’ ಎಂದು ಮಾಹಿತಿ ನೀಡಿದರು. ‘ಈ ರೀತಿ ನಿಧಾನವಾಗಿ ಕೆಲಸ ಮಾಡಿದರೆ, ಸೆಪ್ಟೆಂಬರ್ ಒಳಗೆ ಜನಬಳಕೆ ಲಭ್ಯವಾಗಲಿದೆಯೆನ್ರಿ’ ಎಂದು ಪ್ರಶ್ನಿಸಿದರು.</p>.<p>ಅಮಾನಿಕೆರೆ ಅಂಗಳದಲ್ಲಿ ನಡೆಯುತ್ತಿರುವ ನಡಿಗೆ ಪಥ ಕಾಮಗಾರಿ ವೀಕ್ಷಿಸಿದರು. ಕೆರೆಯ ಅಂಗಳದ ಒತ್ತುವರಿ ತೆರವಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಈ ಕೆರೆ ಅಭಿವೃದ್ಧಿ ಕಾಮಗಾರಿ ಮುಗಿದರೆ, ಇದರಲ್ಲಿ 0.2 ಟಿಎಂಸಿ ಅಡಿ(190 ಎಂಸಿಎಫ್ಟಿ) ನೀರು ಸಂಗ್ರಹ ಮಾಡಬಹುದು. ನಗರದ ನೀರಿನ ಅಗತ್ಯತೆ ಪೂರೈಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.</p>.<p>ತುಮಕೂರಿನ ಸುತ್ತಮುತ್ತಲಿನ ಸುಮಾರು 600 ಎಕರೆ ಜಮೀನನ್ನು ಗುರುತಿಸಿ, ಸ್ಥಳೀಯ ಸಂಸದ, ಶಾಸಕರು ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ. ಅದರಿಂದ 6,000 ನಿವೇಶನಗಳು ಸೃಷ್ಟಿಯಾಗಲಿವೆ ಎಂದು ಸಚಿವರು ಹೇಳಿದರು.</p>.<p>50:50 ಮಾದರಿಯಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಅದರಲ್ಲಿ 3,000 ನಿವೇಶನಗಳು ತುಮಕೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಲಭ್ಯವಾದರೆ, ಉಳಿದರ್ಧ ನಿವೇಶನಗಳು ಜಮೀನನ ಮಾಲೀಕರಿಗೆ ಹೋಗುತ್ತವೆ ಎಂದು ಹೇಳಿದರು.</p>.<p>ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಸಚಿವರು, ಬೇಸಿಗೆ ಸಮೀಪಿಸುತ್ತಿದೆ. ಕುಡಿಯುವ ನೀರು ಸರಬರಾಜು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಂದಾಯ ಜಾಗಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಜನರಿಗೆ ಖಾತೆ ಮಾಡಿಕೊಡುವ ಕುರಿತು, ತೆರಿಗೆ ವಸೂಲಿಯ ಬಗ್ಗೆ ಮತ್ತು ನಗರದ ಸಮಸ್ಯೆಗಳ ಬಗ್ಗೆ ಮೇಯರ್ ಫರೀದಾ ಬೇಗಂ ಸೇರಿದಂತೆ ಪಾಲಿಕೆ ಸದಸ್ಯರು ಸಚಿವರ ಗಮನ ಸೆಳೆದರು.</p>.<p>ಜಿಲ್ಲಾಧಿಕಾರಿ ಕೆ.ರಾಕೇಶ್ಕುಮಾರ್, ಪಾಲಿಕೆ ಆಯುಕ್ತ ಟಿ.ಭೂಬಾಲನ್, ಮುಖ್ಯ ಇಂಜಿನಿಯರ್ ಸಿದ್ಧಗಂಗಪ್ಪ ಇದ್ದರು.</p>.<p>*<br />ಸಂಸದ ಜಿ.ಎಸ್.ಬಸವರಾಜು ಅವರು ತುಮಕೂರು ಅಭಿವೃದ್ಧಿಗಾಗಿ ₹180 ಕೋಟಿ ಅನುದಾನವನ್ನು ಕೇಂದ್ರದಿಂದ ತಂದಿದ್ದಾರೆ. ಅದನ್ನೂ ಸಮರ್ಪಕವಾಗಿ ಬಳಸುತ್ತೇವೆ.<br /><em><strong>-ಬಿ.ಎ.ಬಸವರಾಜು, ನಗರಾಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜನರಿಗೆ ತೊಂದರೆ ಆಗದಂತೆ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜುಅಧಿಕಾರಿಗಳಿಗೆ ಸೂಚಿಸಿದರು.</p>.<p>ಸ್ಮಾರ್ಟ್ ಸಿಟಿ ಲಿಮಿಟೆಡ್ನಿಂದ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದರು.</p>.<p>ಬೇಸಿಗೆ ಮುಗಿಯುವಷ್ಟರಲ್ಲಿ ಬಹುತೇಕ ಕಾಮಗಾರಿಗಳನ್ನು ಮುಗಿಸಬೇಕು. ಮಳೆಗಾಲ ಶುರುವಾದ ಬಳಿಕ ಅಡಚಣೆಗಳು ಹೆಚ್ಚುತ್ತವೆ ಎಂದರು.</p>.<p>ಮಹಾತ್ಮ ಗಾಂಧಿ ಕ್ರೀಡಾಂಗಣದ ಕಾಮಗಾರಿ ಪರಿಶೀಲಿಸುವಾಗ, ‘ಕೆಲಸ ಯಾವಾಗ ಮುಗಿಯುತ್ತದೆ’ ಎಂದು ಕೇಳಿದರು. ಆಗ ಗುತ್ತಿಗೆದಾರ ‘ಸೆಪ್ಟೆಂಬರ್ನಲ್ಲಿ ಮುಗಿಯುತ್ತದೆ ಸರ್’ ಎಂದು ಮಾಹಿತಿ ನೀಡಿದರು. ‘ಈ ರೀತಿ ನಿಧಾನವಾಗಿ ಕೆಲಸ ಮಾಡಿದರೆ, ಸೆಪ್ಟೆಂಬರ್ ಒಳಗೆ ಜನಬಳಕೆ ಲಭ್ಯವಾಗಲಿದೆಯೆನ್ರಿ’ ಎಂದು ಪ್ರಶ್ನಿಸಿದರು.</p>.<p>ಅಮಾನಿಕೆರೆ ಅಂಗಳದಲ್ಲಿ ನಡೆಯುತ್ತಿರುವ ನಡಿಗೆ ಪಥ ಕಾಮಗಾರಿ ವೀಕ್ಷಿಸಿದರು. ಕೆರೆಯ ಅಂಗಳದ ಒತ್ತುವರಿ ತೆರವಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.</p>.<p>ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಈ ಕೆರೆ ಅಭಿವೃದ್ಧಿ ಕಾಮಗಾರಿ ಮುಗಿದರೆ, ಇದರಲ್ಲಿ 0.2 ಟಿಎಂಸಿ ಅಡಿ(190 ಎಂಸಿಎಫ್ಟಿ) ನೀರು ಸಂಗ್ರಹ ಮಾಡಬಹುದು. ನಗರದ ನೀರಿನ ಅಗತ್ಯತೆ ಪೂರೈಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.</p>.<p>ತುಮಕೂರಿನ ಸುತ್ತಮುತ್ತಲಿನ ಸುಮಾರು 600 ಎಕರೆ ಜಮೀನನ್ನು ಗುರುತಿಸಿ, ಸ್ಥಳೀಯ ಸಂಸದ, ಶಾಸಕರು ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ. ಅದರಿಂದ 6,000 ನಿವೇಶನಗಳು ಸೃಷ್ಟಿಯಾಗಲಿವೆ ಎಂದು ಸಚಿವರು ಹೇಳಿದರು.</p>.<p>50:50 ಮಾದರಿಯಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಅದರಲ್ಲಿ 3,000 ನಿವೇಶನಗಳು ತುಮಕೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಲಭ್ಯವಾದರೆ, ಉಳಿದರ್ಧ ನಿವೇಶನಗಳು ಜಮೀನನ ಮಾಲೀಕರಿಗೆ ಹೋಗುತ್ತವೆ ಎಂದು ಹೇಳಿದರು.</p>.<p>ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಸಚಿವರು, ಬೇಸಿಗೆ ಸಮೀಪಿಸುತ್ತಿದೆ. ಕುಡಿಯುವ ನೀರು ಸರಬರಾಜು ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕಂದಾಯ ಜಾಗಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿರುವ ಜನರಿಗೆ ಖಾತೆ ಮಾಡಿಕೊಡುವ ಕುರಿತು, ತೆರಿಗೆ ವಸೂಲಿಯ ಬಗ್ಗೆ ಮತ್ತು ನಗರದ ಸಮಸ್ಯೆಗಳ ಬಗ್ಗೆ ಮೇಯರ್ ಫರೀದಾ ಬೇಗಂ ಸೇರಿದಂತೆ ಪಾಲಿಕೆ ಸದಸ್ಯರು ಸಚಿವರ ಗಮನ ಸೆಳೆದರು.</p>.<p>ಜಿಲ್ಲಾಧಿಕಾರಿ ಕೆ.ರಾಕೇಶ್ಕುಮಾರ್, ಪಾಲಿಕೆ ಆಯುಕ್ತ ಟಿ.ಭೂಬಾಲನ್, ಮುಖ್ಯ ಇಂಜಿನಿಯರ್ ಸಿದ್ಧಗಂಗಪ್ಪ ಇದ್ದರು.</p>.<p>*<br />ಸಂಸದ ಜಿ.ಎಸ್.ಬಸವರಾಜು ಅವರು ತುಮಕೂರು ಅಭಿವೃದ್ಧಿಗಾಗಿ ₹180 ಕೋಟಿ ಅನುದಾನವನ್ನು ಕೇಂದ್ರದಿಂದ ತಂದಿದ್ದಾರೆ. ಅದನ್ನೂ ಸಮರ್ಪಕವಾಗಿ ಬಳಸುತ್ತೇವೆ.<br /><em><strong>-ಬಿ.ಎ.ಬಸವರಾಜು, ನಗರಾಭಿವೃದ್ಧಿ ಸಚಿವ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>