<p><strong>ಗುಬ್ಬಿ</strong>: ಪಟ್ಟಣದ ಇತಿಹಾಸ ಪ್ರಸಿದ್ಧ ಬೇಟೆರಾಯ ಸ್ವಾಮಿ ಬ್ರಹ್ಮ ರಥೋತ್ಸವವು ಸೋಮವಾರ ನಡೆಯಿತು.</p>.<p>ಬೆಳಿಗ್ಗೆ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ರುದ್ರಾ ಭಿಷೇಕ, ಕ್ಷೀರಾಭಿಷೇಕ, ಹವನ, ಹೋಮ ನಡೆಸಿದ ನಂತರ ಪೂರ್ಣಾ ಹುತಿ ನೀಡಲಾಯಿತು. ದೇವರ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.</p>.<p>ಮಹಾ ಮಂಗಳಾರತಿ ನಂತರ ಮಧ್ಯಾಹ್ನ 1 ಗಂಟೆಗೆ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ವಿಶೇಷ ಪುಷ್ಪಗಳಿಂದ ಅಲಂಕೃತವಾಗಿದ್ದ ತೇರಿನಲ್ಲಿ ಕೂರಿಸಲಾಯಿತು. ಈ ಬಾರಿ ತಾಲ್ಲೂಕಿನಾದ್ಯಂತ ಭಕ್ತರು ಆಗಮಿಸುವ ಮೂಲಕ ಜಾತ್ರೆ ಕಳೆಗಟ್ಟಿತ್ತು.</p>.<p>ರಥೋತ್ಸವದಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರು, ಎಲ್ಲಾ ಪಕ್ಷಗಳ ಮುಖಂಡರು, ಪಟ್ಟಣದ 18 ಕೋಮಿನ ಮುಖಂಡರು, ತಹಶೀಲ್ದಾರ್ ಬಿ. ಆರತಿ ಭಾಗವಹಿಸಿದ್ದರು. ಭಕ್ತರಿಗೆ ಪಾನಕ, ಫಲಹಾರ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ಪಟ್ಟಣದ ಇತಿಹಾಸ ಪ್ರಸಿದ್ಧ ಬೇಟೆರಾಯ ಸ್ವಾಮಿ ಬ್ರಹ್ಮ ರಥೋತ್ಸವವು ಸೋಮವಾರ ನಡೆಯಿತು.</p>.<p>ಬೆಳಿಗ್ಗೆ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ರುದ್ರಾ ಭಿಷೇಕ, ಕ್ಷೀರಾಭಿಷೇಕ, ಹವನ, ಹೋಮ ನಡೆಸಿದ ನಂತರ ಪೂರ್ಣಾ ಹುತಿ ನೀಡಲಾಯಿತು. ದೇವರ ಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.</p>.<p>ಮಹಾ ಮಂಗಳಾರತಿ ನಂತರ ಮಧ್ಯಾಹ್ನ 1 ಗಂಟೆಗೆ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ವಿಶೇಷ ಪುಷ್ಪಗಳಿಂದ ಅಲಂಕೃತವಾಗಿದ್ದ ತೇರಿನಲ್ಲಿ ಕೂರಿಸಲಾಯಿತು. ಈ ಬಾರಿ ತಾಲ್ಲೂಕಿನಾದ್ಯಂತ ಭಕ್ತರು ಆಗಮಿಸುವ ಮೂಲಕ ಜಾತ್ರೆ ಕಳೆಗಟ್ಟಿತ್ತು.</p>.<p>ರಥೋತ್ಸವದಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಸದಸ್ಯರು, ಎಲ್ಲಾ ಪಕ್ಷಗಳ ಮುಖಂಡರು, ಪಟ್ಟಣದ 18 ಕೋಮಿನ ಮುಖಂಡರು, ತಹಶೀಲ್ದಾರ್ ಬಿ. ಆರತಿ ಭಾಗವಹಿಸಿದ್ದರು. ಭಕ್ತರಿಗೆ ಪಾನಕ, ಫಲಹಾರ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>