<p><strong>ತುಮಕೂರು: </strong>ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಶುಕ್ರವಾರ ಚಾಲನೆ ನೀಡಿದರು.</p>.<p>ತಾಲ್ಲೂನ ಕೋರ ಹೋಬಳಿ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಚಿತ್ರ ಅಪ್ಲೋಡ್ ಮಾಡುವ ಮೂಲಕ ಚಾಲನೆ ನೀಡಿದರು. ‘3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಚಿತ್ರ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಚಿತ್ರ ತೆಗೆದು ಸ್ವಯಂ ಅಪ್ಲೋಡ್ ಮಾಡಬಹುದು’ ಎಂದರು.</p>.<p>ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ತಾವೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ಪಡೆಯಲು ಉಪಯೋಗ ಆಗುತ್ತದೆ ಎಂದು ವಿವರಿಸಿದರು.</p>.<p>ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ಆ. 24ಕಡೆಯ ದಿನವಾಗಿದೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವಯಂ ದಾಖಲಿಸುವ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಶುಕ್ರವಾರ ಚಾಲನೆ ನೀಡಿದರು.</p>.<p>ತಾಲ್ಲೂನ ಕೋರ ಹೋಬಳಿ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಬೆಳೆಗಳ ಚಿತ್ರ ಅಪ್ಲೋಡ್ ಮಾಡುವ ಮೂಲಕ ಚಾಲನೆ ನೀಡಿದರು. ‘3 ವರ್ಷಗಳಿಂದ ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಮೊದಲು ಆಯಾ ಗ್ರಾಮದ ಪಿಆರ್ಒಗಳು ರೈತರ ಜಮೀನುಗಳಿಗೆ ಬಂದು ಬೆಳೆಯ ಚಿತ್ರ ತೆಗೆಯುತ್ತಿದ್ದರು. ಆದರೆ ಪ್ರಸಕ್ತ ವರ್ಷದಿಂದ ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಚಿತ್ರ ತೆಗೆದು ಸ್ವಯಂ ಅಪ್ಲೋಡ್ ಮಾಡಬಹುದು’ ಎಂದರು.</p>.<p>ಬೆಳೆ ಸಮೀಕ್ಷೆಗಾಗಿ ರೈತರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವಂತಿಲ್ಲ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯನ್ನು ತಾವೇ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆಯಡಿ ಸಂಗ್ರಹವಾಗುವ ಮಾಹಿತಿಯನ್ನು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ಪಡೆಯಲು ಉಪಯೋಗ ಆಗುತ್ತದೆ ಎಂದು ವಿವರಿಸಿದರು.</p>.<p>ರೈತರು ಕೂಡಲೇ ಕಾರ್ಯಪ್ರವೃತ್ತರಾಗಿ ತಮ್ಮ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಬೇಕು. ಬೆಳೆಗಳ ವಿವರಗಳನ್ನು ದಾಖಲಿಸಲು ಆ. 24ಕಡೆಯ ದಿನವಾಗಿದೆ ಎಂದು ಹೇಳಿದರು.</p>.<p>ತಹಶೀಲ್ದಾರ್ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜ ಸುಲೋಚನ, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ರಘು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>