<p><strong>ಗುಬ್ಬಿ:</strong> ಉತ್ತಮ ಸಮಾಜ ನಿರ್ಮಾಣ ಹಾಗೂ ಈ ದೇಶದ ಅಭಿವೃದ್ಧಿಯ ಬಗ್ಗೆ ಅಪಾರ ಕನಸು ಕಂಡಿದ್ದ ಸ್ವಾಮಿ ವಿವೇಕಾನಂದರ ಸ್ಮರಣೆ ನಿತ್ಯ ನೂತನವಾಗಿರಬೇಕು ಎಂದು ನಿವೃತ್ತ ಶಿಕ್ಷಕ ಬಿ.ಸಿ ಶಿವಣ್ಣ ಹೇಳಿದರು.</p>.<p>ದಾಸರ ಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇಶದ ಯುವ ಪೀಳಿಗೆ ಅಮೂಲ್ಯವಾದ ಸಂಪತ್ತಾಗಿದೆ. ಅವರಿಗೆ ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಬಲಿಷ್ಠ ದೇಶ ಕಟ್ಟಲು ಸಾಧ್ಯ. ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಿ ಎಲ್ಲರಲ್ಲಿಯೂ ಒಂದೇ ಎಂಬ ಭಾವನೆ ಮೂಡಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.</p>.<p>ಅಂಬೇಡ್ಕರ್ ದೇಶದ ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶ್ವ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿದ್ದುಕೊಂಡು ಸಾಗೋಣ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಮಾತನಾಡಿ, ಯುವಕರನ್ನು ಪ್ರೇರೇಪಿಸುತ್ತಾ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸಂಘ ಸ್ಥಾಪಿಸಲಾಗಿದೆ. ಈಗಾಗಲೇ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಶೋಷಿತ ಜನರ ಧ್ವನಿಯಾಗುತ್ತಿದ್ದೇವೆ ಎಂದು ತಿಳಿಸಿದರು.</p>.<p>ಆನಂದಮೂರ್ತಿ, ಅನಂತ್, ನಾರಾಯಣ, ಸಂತೋಷ್, ವಿಜಯ್, ನಯನ, ಶ್ರೀನಿವಾಸ್, ಶಿವು, ಸಂತೋಷ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಉತ್ತಮ ಸಮಾಜ ನಿರ್ಮಾಣ ಹಾಗೂ ಈ ದೇಶದ ಅಭಿವೃದ್ಧಿಯ ಬಗ್ಗೆ ಅಪಾರ ಕನಸು ಕಂಡಿದ್ದ ಸ್ವಾಮಿ ವಿವೇಕಾನಂದರ ಸ್ಮರಣೆ ನಿತ್ಯ ನೂತನವಾಗಿರಬೇಕು ಎಂದು ನಿವೃತ್ತ ಶಿಕ್ಷಕ ಬಿ.ಸಿ ಶಿವಣ್ಣ ಹೇಳಿದರು.</p>.<p>ದಾಸರ ಕಲ್ಲಹಳ್ಳಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕರ ಸಂಘ ಸೋಮವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ದೇಶದ ಯುವ ಪೀಳಿಗೆ ಅಮೂಲ್ಯವಾದ ಸಂಪತ್ತಾಗಿದೆ. ಅವರಿಗೆ ಉತ್ತಮ ಮಾರ್ಗದರ್ಶನ ನೀಡಿದಲ್ಲಿ ಬಲಿಷ್ಠ ದೇಶ ಕಟ್ಟಲು ಸಾಧ್ಯ. ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಿ ಎಲ್ಲರಲ್ಲಿಯೂ ಒಂದೇ ಎಂಬ ಭಾವನೆ ಮೂಡಿಸಲು ಪ್ರಯತ್ನಿಸಿದ್ದರು ಎಂದು ಹೇಳಿದರು.</p>.<p>ಅಂಬೇಡ್ಕರ್ ದೇಶದ ಶೋಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶ್ವ ಶ್ರೇಷ್ಠ ಸಂವಿಧಾನ ರಚಿಸಿದ್ದಾರೆ. ನಾವೆಲ್ಲರೂ ಸಂವಿಧಾನದ ಆಶಯಗಳಿಗೆ ಬದ್ಧರಾಗಿದ್ದುಕೊಂಡು ಸಾಗೋಣ ಎಂದು ತಿಳಿಸಿದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಮಾತನಾಡಿ, ಯುವಕರನ್ನು ಪ್ರೇರೇಪಿಸುತ್ತಾ ಉತ್ತಮ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಸಂಘ ಸ್ಥಾಪಿಸಲಾಗಿದೆ. ಈಗಾಗಲೇ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಶೋಷಿತ ಜನರ ಧ್ವನಿಯಾಗುತ್ತಿದ್ದೇವೆ ಎಂದು ತಿಳಿಸಿದರು.</p>.<p>ಆನಂದಮೂರ್ತಿ, ಅನಂತ್, ನಾರಾಯಣ, ಸಂತೋಷ್, ವಿಜಯ್, ನಯನ, ಶ್ರೀನಿವಾಸ್, ಶಿವು, ಸಂತೋಷ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>