ನಿರಂತರವಾಗಿ ಮಳೆ ಸುರಿಯುತ್ತಿದ್ದರಿಂದ. ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ. ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ.