ಮಧುಗಿರಿ: ಹೆಜ್ಜೇನು ದಾಳಿಯಿಂದ ಅಸ್ವಸ್ಥಗೊಂಡಿದ್ದ ಐವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಸೋಮವಾರ ದಾಖಲಾಗಿದೆ.
ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಸಭೆ ಆಯೋಜಿಸಲಾಗಿತ್ತು. ವೇದಿಕೆಯ ಬಳಿ ಹೆಜ್ಜೇನು ಗೂಡು ಕಟ್ಟಿದ್ದು ಗದ್ದಲದಿಂದ ದಾಳಿ ಮಾಡಿದೆ. ಎಂ.ಎಸ್.ರಘುನಾಥ್, ಶಿವಕುಮಾರ್, ರಾಮಯ್ಯ, ಅಶೋಕ್ ಸೇರಿದಂತೆ ಐವರು ಅಸ್ವಸ್ಥರಾಗಿದ್ದಾರೆ.
ತಕ್ಷಣ ಗಾಯಾಳುಗಳನ್ನು ಮಿಡಿಗೇಶಿ ಹಾಗೂ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ತೀವ್ರವಾಗಿ ಅಸ್ವಸ್ಥರಾಗಿದ್ದ ಎಂ.ಎಸ್.ರಘುನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ದಾರ್ಥ ಆಸ್ಪತ್ರೆಗೆ ದಾಖಲಿಸಲಾಗಿದೆ.