<p><strong>ತುಮಕೂರು: </strong>ರಾಜಕೀಯ, ಧಾರ್ಮಿಕ, ಸಂಸ್ಕೃತಿ, ರಾಷ್ಟ್ರೀಯತೆಗಳೆಲ್ಲ ಅಪಮೌಲ್ಯೀಕರಣವಾಗಿ ಮಕ್ಕಳ ಮೇಲೆ ಅತ್ಯಾಚಾರ, ರೈತರ ಆತ್ಮಹತ್ಯೆ ಮೂಲಕ ಸ್ವಾತಂತ್ರ್ಯ ಇಂದು ಅಪಹಾಸ್ಯಕ್ಕೀಡಾಗುತ್ತಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.</p>.<p>ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಪತ್ರಕರ್ತ ಜಿ.ಇಂದ್ರಕುಮಾರ್ ಅವರ ಕೃತಿ ‘ಬಹುಜನ ಸಂಗ್ರಾಮ’ ಸಂಶೋಧನಾ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಧಾರ್ಮಿಕ ನ್ಯಾಯ ದೇಶದ ಧರ್ಮವಾಗಬೇಕು. ಗಾಂಧೀಜಿ ಹೇಳಿದ ಕೋಮು ಸಾಮರಸ್ಯದಿಂದ ಎಲ್ಲ ಧರ್ಮಗಳ ಹಿತರಕ್ಷಣೆಯಾಗುತ್ತದೆ’ ಎಂದು ಪ್ರಸಿದ್ಧ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.</p>.<p>‘ಗೋಡ್ಸೆ ಪ್ರೇರಿತ ರಾಷ್ಟ್ರೀಯ ವಾದವನ್ನು ಏಕಸಂಸ್ಕೃತಿ ದೇಶದ ಮೇಲೆ ಹೇರಲು ಹೊರಟಿದೆ. ಬಹುಸಂಸ್ಕೃತಿ ಮತ್ತು ಏಕ ಸಂಸ್ಕೃತಿಗಳ ಸಮ್ಮಿಲನದಿಂದ ಭಾರತ ದೇಶ ಸಾಮರಸ್ಯದ ವಿಕಾಸಕ್ಕೆ ನಾಂದಿಯಾಗಬೇಕು ಎಂದು ತಿಳಿಸಿದರು.</p>.<p>‘ಬಹುಸಂಸ್ಕೃತಿ ಮತ್ತು ಬಹುಜನರು ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡುವ ಮೂಲಕ ದೇಶಕ್ಕೆ ಬಹುದೊಡ್ಡ ಚರಿತ್ರೆಯನ್ನು ನಿರ್ಮಿಸಲು ಕಾರಣವಾದರು. ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ ನಡೆಸಿದ ನೂರಾರು ಮಂದಿ ಅಲಕ್ಷಿತ ಸಮುದಾಯದ ಜನರ ಶ್ರಮವನ್ನು ಬಹುಜನ ಸಂಗ್ರಾಮ ಕೃತಿ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದೆ’ ಎಂದು ಹೇಳಿದರು.</p>.<p>ವಿಮರ್ಶಕ, ಉಪನ್ಯಾಸಕ ಡಾ. ರವಿಕುಮಾರ್ ನೀಹ ಮಾತನಾಡಿ, ‘ಬಹುಜನ ಸಂಗ್ರಾಮ ಕೃತಿಯನ್ನು ಕುರಿತು ಅಲಕ್ಷಿತ ಸಮುದಾಯಗಳು ಸಮಾಜಕ್ಕೆ ನೀಡಿರುವ ಕೊಡುಗೆ, ಸಮುದಾಯಗಳ ಹಿತರಕ್ಷಣೆ, ಸ್ಥಳೀಯ ಚರಿತ್ರೆ ಮೂಲಕ ಬಹುಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದೆ ಎಂದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಅಧ್ಯಕ್ಷತೆ ವಹಿಸಿದ್ದರು.ಸ್ಟೂಡೆಂಟ್ ಬುಕ್ ಹೌಸ್ ಮಾಲೀಕ ಸದಾಶಿವ, ಲೇಖಕರಾದ ವಿಜಯಾ ಮೋಹನ್ ಇದ್ದರು. ಪ್ರಾಚಾರ್ಯರಾದ ಬಾಬುರಾವ್ ಕುಂದಗೋಳ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ.ಲೀಲಾ ಲೇಪಾಕ್ಷಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ರಾಜಕೀಯ, ಧಾರ್ಮಿಕ, ಸಂಸ್ಕೃತಿ, ರಾಷ್ಟ್ರೀಯತೆಗಳೆಲ್ಲ ಅಪಮೌಲ್ಯೀಕರಣವಾಗಿ ಮಕ್ಕಳ ಮೇಲೆ ಅತ್ಯಾಚಾರ, ರೈತರ ಆತ್ಮಹತ್ಯೆ ಮೂಲಕ ಸ್ವಾತಂತ್ರ್ಯ ಇಂದು ಅಪಹಾಸ್ಯಕ್ಕೀಡಾಗುತ್ತಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು.</p>.<p>ನಗರದ ರವೀಂದ್ರ ಕಲಾನಿಕೇತನ ಸಭಾಂಗಣದಲ್ಲಿ ಪತ್ರಕರ್ತ ಜಿ.ಇಂದ್ರಕುಮಾರ್ ಅವರ ಕೃತಿ ‘ಬಹುಜನ ಸಂಗ್ರಾಮ’ ಸಂಶೋಧನಾ ಕೃತಿ ಬಿಡುಗಡೆ ಮಾಡಿ ಮಾತನಾಡಿದರು.</p>.<p>‘ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ ಧಾರ್ಮಿಕ ನ್ಯಾಯ ದೇಶದ ಧರ್ಮವಾಗಬೇಕು. ಗಾಂಧೀಜಿ ಹೇಳಿದ ಕೋಮು ಸಾಮರಸ್ಯದಿಂದ ಎಲ್ಲ ಧರ್ಮಗಳ ಹಿತರಕ್ಷಣೆಯಾಗುತ್ತದೆ’ ಎಂದು ಪ್ರಸಿದ್ಧ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.</p>.<p>‘ಗೋಡ್ಸೆ ಪ್ರೇರಿತ ರಾಷ್ಟ್ರೀಯ ವಾದವನ್ನು ಏಕಸಂಸ್ಕೃತಿ ದೇಶದ ಮೇಲೆ ಹೇರಲು ಹೊರಟಿದೆ. ಬಹುಸಂಸ್ಕೃತಿ ಮತ್ತು ಏಕ ಸಂಸ್ಕೃತಿಗಳ ಸಮ್ಮಿಲನದಿಂದ ಭಾರತ ದೇಶ ಸಾಮರಸ್ಯದ ವಿಕಾಸಕ್ಕೆ ನಾಂದಿಯಾಗಬೇಕು ಎಂದು ತಿಳಿಸಿದರು.</p>.<p>‘ಬಹುಸಂಸ್ಕೃತಿ ಮತ್ತು ಬಹುಜನರು ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡುವ ಮೂಲಕ ದೇಶಕ್ಕೆ ಬಹುದೊಡ್ಡ ಚರಿತ್ರೆಯನ್ನು ನಿರ್ಮಿಸಲು ಕಾರಣವಾದರು. ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ ನಡೆಸಿದ ನೂರಾರು ಮಂದಿ ಅಲಕ್ಷಿತ ಸಮುದಾಯದ ಜನರ ಶ್ರಮವನ್ನು ಬಹುಜನ ಸಂಗ್ರಾಮ ಕೃತಿ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದೆ’ ಎಂದು ಹೇಳಿದರು.</p>.<p>ವಿಮರ್ಶಕ, ಉಪನ್ಯಾಸಕ ಡಾ. ರವಿಕುಮಾರ್ ನೀಹ ಮಾತನಾಡಿ, ‘ಬಹುಜನ ಸಂಗ್ರಾಮ ಕೃತಿಯನ್ನು ಕುರಿತು ಅಲಕ್ಷಿತ ಸಮುದಾಯಗಳು ಸಮಾಜಕ್ಕೆ ನೀಡಿರುವ ಕೊಡುಗೆ, ಸಮುದಾಯಗಳ ಹಿತರಕ್ಷಣೆ, ಸ್ಥಳೀಯ ಚರಿತ್ರೆ ಮೂಲಕ ಬಹುಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದೆ ಎಂದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಅಧ್ಯಕ್ಷತೆ ವಹಿಸಿದ್ದರು.ಸ್ಟೂಡೆಂಟ್ ಬುಕ್ ಹೌಸ್ ಮಾಲೀಕ ಸದಾಶಿವ, ಲೇಖಕರಾದ ವಿಜಯಾ ಮೋಹನ್ ಇದ್ದರು. ಪ್ರಾಚಾರ್ಯರಾದ ಬಾಬುರಾವ್ ಕುಂದಗೋಳ ಸ್ವಾಗತಿಸಿದರು. ಪ್ರಾಧ್ಯಾಪಕಿ ಡಾ.ಲೀಲಾ ಲೇಪಾಕ್ಷಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>