<p><strong>ತುರುವೇಕೆರೆ:</strong> ವಿವಿಧ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಶುಕ್ರವಾರ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ದಾಖಲಾತಿ ಪರಿಶೀಲಿಸಿದರು.</p>.<p>ತಾಲ್ಲೂಕಿನ ಕಸಬಾ ಮತ್ತು ದಂಡಿನಶಿವರ ಹೋಬಳಿ ವ್ಯಾಪ್ತಿಯ ಕಲ್ಕೆರೆ, ದೊಡ್ಡಗೋರಾಘಟ್ಟ, ಸಿದ್ದನಹಟ್ಟಿ, ಮುನಿಯೂರು, ಮಾದಿಹಳ್ಳಿ, ತಾಳ್ಕೆರೆ, ಅರಳೀಕೆರೆ, ಹರಿಕಾರನಹಳ್ಳಿ, ಬಾಣಸಂದ್ರ, ಲೋಕಮ್ಮನಹಳ್ಳಿ, ಪಟ್ಟಣದ ವಿದ್ಯಾರಣ್ಯ ಪ್ರೌಢಶಾಲೆ, ಜಿಜೆಸಿ, ದೊಂಬರನಹಳ್ಳಿ, ಆನೇಕೆರೆ ಗ್ರಾಮಗಳ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢ ಶಾಲೆ ಹಾಗೂ ಅನುದಾನಿತ ಪ್ರೌಢಶಾಲೆಗಳಿಗೆ ಭೇಟಿ ನೀಡಿದರು.</p>.<p>ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕಾರ್ಯವೈಖರಿ, ಮಕ್ಕಳ ತರಗತಿವಾರು ಹಾಜರಾತಿ, ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ ವಿತರಣೆ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಂಡರು.</p>.<p>ತರಗತಿವಾರು ಸೇತುಬಂಧ ಮತ್ತು ಸದರಿ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶಮುಖಿ ಕಾರ್ಯಚಟುವಟಿಕೆಗಳು ಹಾಗೂ ಪ್ರತಿ ವಿದ್ಯಾರ್ಥಿಗೂ ಕಡ್ಡಾಯವಾಗಿ ಓದು, ಬರಹ, ಸರಳ ಲೆಕ್ಕಾಚಾರ ಗಣಿತ ಬರುವಂತೆ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ನೋಡಿಕೊಳ್ಳಬೇಕು ಎಂದು ಹೇಳಿದರು. ಮಕ್ಕಳು ನಿರಂತರ ಗೈರಾಗದಂತೆ ನೋಡಿಕೊಳ್ಳಬೇಕು. ಶಾಲೆ ಫಲಿತಾಂಶ ಶೇಕಡ ನೂರರಷ್ಟು ಬರುವಂತೆ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಸೂಚಿಸಿದರು.</p>.<p>ಸೋಮೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಾಂತರಾಜು, ಶೆಟ್ಟಿಗೊಂಡನಹಳ್ಳಿ ಶಾಲೆಯ ವಾಸು, ಸಹ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ವಿವಿಧ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಸೋಮಶೇಖರ್ ಶುಕ್ರವಾರ ಭೇಟಿ ನೀಡಿ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ದಾಖಲಾತಿ ಪರಿಶೀಲಿಸಿದರು.</p>.<p>ತಾಲ್ಲೂಕಿನ ಕಸಬಾ ಮತ್ತು ದಂಡಿನಶಿವರ ಹೋಬಳಿ ವ್ಯಾಪ್ತಿಯ ಕಲ್ಕೆರೆ, ದೊಡ್ಡಗೋರಾಘಟ್ಟ, ಸಿದ್ದನಹಟ್ಟಿ, ಮುನಿಯೂರು, ಮಾದಿಹಳ್ಳಿ, ತಾಳ್ಕೆರೆ, ಅರಳೀಕೆರೆ, ಹರಿಕಾರನಹಳ್ಳಿ, ಬಾಣಸಂದ್ರ, ಲೋಕಮ್ಮನಹಳ್ಳಿ, ಪಟ್ಟಣದ ವಿದ್ಯಾರಣ್ಯ ಪ್ರೌಢಶಾಲೆ, ಜಿಜೆಸಿ, ದೊಂಬರನಹಳ್ಳಿ, ಆನೇಕೆರೆ ಗ್ರಾಮಗಳ ಸರ್ಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಢ ಶಾಲೆ ಹಾಗೂ ಅನುದಾನಿತ ಪ್ರೌಢಶಾಲೆಗಳಿಗೆ ಭೇಟಿ ನೀಡಿದರು.</p>.<p>ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಕಾರ್ಯವೈಖರಿ, ಮಕ್ಕಳ ತರಗತಿವಾರು ಹಾಜರಾತಿ, ದಾಖಲಾತಿ, ಪಠ್ಯಪುಸ್ತಕ, ಸಮವಸ್ತ್ರ ವಿತರಣೆ, ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಂಡರು.</p>.<p>ತರಗತಿವಾರು ಸೇತುಬಂಧ ಮತ್ತು ಸದರಿ ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶಮುಖಿ ಕಾರ್ಯಚಟುವಟಿಕೆಗಳು ಹಾಗೂ ಪ್ರತಿ ವಿದ್ಯಾರ್ಥಿಗೂ ಕಡ್ಡಾಯವಾಗಿ ಓದು, ಬರಹ, ಸರಳ ಲೆಕ್ಕಾಚಾರ ಗಣಿತ ಬರುವಂತೆ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ನೋಡಿಕೊಳ್ಳಬೇಕು ಎಂದು ಹೇಳಿದರು. ಮಕ್ಕಳು ನಿರಂತರ ಗೈರಾಗದಂತೆ ನೋಡಿಕೊಳ್ಳಬೇಕು. ಶಾಲೆ ಫಲಿತಾಂಶ ಶೇಕಡ ನೂರರಷ್ಟು ಬರುವಂತೆ ಎಲ್ಲ ಶಿಕ್ಷಕರು ಶ್ರಮಿಸಬೇಕು ಎಂದು ಸೂಚಿಸಿದರು.</p>.<p>ಸೋಮೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಾಂತರಾಜು, ಶೆಟ್ಟಿಗೊಂಡನಹಳ್ಳಿ ಶಾಲೆಯ ವಾಸು, ಸಹ ಶಿಕ್ಷಕರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>