<p><strong>ತುಮಕೂರು:</strong> ವಿದ್ಯುತ್ ಪರಿವರ್ತಕ ಬದಲಾವಣೆಗಾಗಿ ಹಣಕ್ಕೆ ಬೇಡಿಕೆ ಇಟ್ಟು ಎಸಿಬಿ ಬಲೆಗೆ ಬಿದ್ದಿದ್ದ ಗುಬ್ಬಿ ಬೆಸ್ಕಾಂ ಜೂನಿಯರ್ ಎಂಜಿನಿಯರ್ ರವೀಶ್ಗೆ ಜಿಲ್ಲಾ 7ನೇ ಸೆಷನ್ಸ್ ನ್ಯಾಯಾಲಯವು 4 ವರ್ಷಗಳ ಕಠಿಣ ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿದೆ.</p>.<p>ರೈತ ಯಶವಂತ್ ಅವರ ಜಮೀನಿನ 2016ರಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿಗೆ ಬಂದಿತ್ತು. ಪರಿವರ್ತಕ ಬದಲಿಸಿಕೊಡುವಂತೆ ಅವರು ಅರ್ಜಿ ಸಲ್ಲಿಸಿದ್ದರು. ಆಗ ರವೀಶ್ ಹಣ ನೀಡಿದರೆ ಪರಿವರ್ತಕ ಬದಲಿಸಿಕೊಡುವುದಾಗಿ ಹೇಳಿದ್ದರು. ಈ ಸಂಬಂಧ ಯಶವಂತ್ ಎಸಿಬಿಗೆ ದೂರು ನೀಡಿದ್ದು, ರೈತರಿಂದ ಹಣ ಪಡೆಯುವಾಗ ರವೀಶ್ನನ್ನು ಅಧಿಕಾರಿಗಳು ಬಂಧಿಸಿದ್ದರು.</p>.<p>ಇನ್ಸ್ಪೆಕ್ಟರ್ ವಿ.ಎಂ.ಗುರುಪ್ರಸಾದ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಈ ತೀರ್ಪು ನೀಡಿದ್ದು ಸರ್ಕಾರದ ಪರವಾಗಿ ಎನ್.ಬಿ.ಬಸವರಾಜು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವಿದ್ಯುತ್ ಪರಿವರ್ತಕ ಬದಲಾವಣೆಗಾಗಿ ಹಣಕ್ಕೆ ಬೇಡಿಕೆ ಇಟ್ಟು ಎಸಿಬಿ ಬಲೆಗೆ ಬಿದ್ದಿದ್ದ ಗುಬ್ಬಿ ಬೆಸ್ಕಾಂ ಜೂನಿಯರ್ ಎಂಜಿನಿಯರ್ ರವೀಶ್ಗೆ ಜಿಲ್ಲಾ 7ನೇ ಸೆಷನ್ಸ್ ನ್ಯಾಯಾಲಯವು 4 ವರ್ಷಗಳ ಕಠಿಣ ಶಿಕ್ಷೆ ಮತ್ತು ₹ 10,000 ದಂಡ ವಿಧಿಸಿದೆ.</p>.<p>ರೈತ ಯಶವಂತ್ ಅವರ ಜಮೀನಿನ 2016ರಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿಗೆ ಬಂದಿತ್ತು. ಪರಿವರ್ತಕ ಬದಲಿಸಿಕೊಡುವಂತೆ ಅವರು ಅರ್ಜಿ ಸಲ್ಲಿಸಿದ್ದರು. ಆಗ ರವೀಶ್ ಹಣ ನೀಡಿದರೆ ಪರಿವರ್ತಕ ಬದಲಿಸಿಕೊಡುವುದಾಗಿ ಹೇಳಿದ್ದರು. ಈ ಸಂಬಂಧ ಯಶವಂತ್ ಎಸಿಬಿಗೆ ದೂರು ನೀಡಿದ್ದು, ರೈತರಿಂದ ಹಣ ಪಡೆಯುವಾಗ ರವೀಶ್ನನ್ನು ಅಧಿಕಾರಿಗಳು ಬಂಧಿಸಿದ್ದರು.</p>.<p>ಇನ್ಸ್ಪೆಕ್ಟರ್ ವಿ.ಎಂ.ಗುರುಪ್ರಸಾದ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಈ ತೀರ್ಪು ನೀಡಿದ್ದು ಸರ್ಕಾರದ ಪರವಾಗಿ ಎನ್.ಬಿ.ಬಸವರಾಜು ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>