<p><strong>ತುಮಕೂರು:</strong> ಜಿಲ್ಲಾ ಆಡಳಿತ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಚಾಲನೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರಾದ ನಾಹಿದಾ ಜಮ್ ಜಮ್ ಸೇರಿ 22 ಮಂದಿಗೆ ಪ್ರಶಸ್ತಿ ವಿತರಿಸಲಾಯಿತು.</p>.<p>ರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರ, ಸ್ಕೇಟಿಂಗ್ ಕ್ರೀಡಾಪಟು ಜಯತೀಕ್ಷ ಅವರನ್ನು ಗೌರವಿಸಲಾಯಿತು.</p>.<p>ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಚಲನೆಯೇ ಜೀವನ, ಜಡತೆಯೇ ಸಾವು. ಮನುಷ್ಯ ಸದಾ ಕ್ರಿಯಾಶೀಲವಾಗಿರಬೇಕು. ಅಂತಹವರು ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಸರ್ಕಾರಿ ನೌಕರರು ಕ್ರಿಯಾಶೀಲರಾಗಿರಬೇಕು’ ಎಂದು ಸಲಹೆ ಮಾಡಿದರು.</p>.<p>ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಮುಖ್ಯಮಂತ್ರಿ ಕಾರ್ಯಕ್ರಮ, ದಸರಾ ಉತ್ಸವ, ಒಲಿಂಪಿಕ್ಸ್ ಕ್ರೀಡಾಕೂಟ ಸೇರಿದಂತೆ ರಾಜ್ಯ ಮಟ್ಟದ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ. ಇದರ ಯಶಸ್ಸು ನೌಕರರಿಗೇ ಸೇರಬೇಕು ಎಂದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ‘ಸರ್ಕಾರಿ ನೌಕರರ ಮೇಲೆ ಹಲ್ಲೆ, ನಿಂದನೆಗೆ ಕಡಿವಾಣ ಹಾಕಲು ಶೀಘ್ರವೇ ಸರ್ಕಾರ ಆದೇಶ ಹೊರಡಿಸಲಿದೆ. ಹೊಸ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಹೋರಾಟ ಮುಂದುವರಿಸಲಾಗಿದೆ. ಈ ಬಗ್ಗೆ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಇ.ರಮೇಶ್, ಸಂಘದ ಕಾರ್ಯದರ್ಶಿ ಆರ್.ಪರಮೇಶ್ವರ, ರಾಜ್ಯ ಕ್ರೀಡಾ<br />ಕಾರ್ಯದರ್ಶಿ ಮೋಹನ್ ಕುಮಾರ್, ಮಧುಗಿರಿ ಶೈಕ್ಷಣಿಕ ಜಿಲ್ಲೆ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ಶುಭ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲಾ ಆಡಳಿತ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಚಾಲನೆ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಸಚಿವರಾದ ನಾಹಿದಾ ಜಮ್ ಜಮ್ ಸೇರಿ 22 ಮಂದಿಗೆ ಪ್ರಶಸ್ತಿ ವಿತರಿಸಲಾಯಿತು.</p>.<p>ರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಚೈತ್ರ, ಸ್ಕೇಟಿಂಗ್ ಕ್ರೀಡಾಪಟು ಜಯತೀಕ್ಷ ಅವರನ್ನು ಗೌರವಿಸಲಾಯಿತು.</p>.<p>ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಚಲನೆಯೇ ಜೀವನ, ಜಡತೆಯೇ ಸಾವು. ಮನುಷ್ಯ ಸದಾ ಕ್ರಿಯಾಶೀಲವಾಗಿರಬೇಕು. ಅಂತಹವರು ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಸರ್ಕಾರಿ ನೌಕರರು ಕ್ರಿಯಾಶೀಲರಾಗಿರಬೇಕು’ ಎಂದು ಸಲಹೆ ಮಾಡಿದರು.</p>.<p>ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಎರಡು ಬಾರಿ ಮುಖ್ಯಮಂತ್ರಿ ಕಾರ್ಯಕ್ರಮ, ದಸರಾ ಉತ್ಸವ, ಒಲಿಂಪಿಕ್ಸ್ ಕ್ರೀಡಾಕೂಟ ಸೇರಿದಂತೆ ರಾಜ್ಯ ಮಟ್ಟದ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಲಾಗಿದೆ. ಇದರ ಯಶಸ್ಸು ನೌಕರರಿಗೇ ಸೇರಬೇಕು ಎಂದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ‘ಸರ್ಕಾರಿ ನೌಕರರ ಮೇಲೆ ಹಲ್ಲೆ, ನಿಂದನೆಗೆ ಕಡಿವಾಣ ಹಾಕಲು ಶೀಘ್ರವೇ ಸರ್ಕಾರ ಆದೇಶ ಹೊರಡಿಸಲಿದೆ. ಹೊಸ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಹೋರಾಟ ಮುಂದುವರಿಸಲಾಗಿದೆ. ಈ ಬಗ್ಗೆ ಸರ್ಕಾರದೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ’ ಎಂದು ಹೇಳಿದರು.</p>.<p>ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಇ.ರಮೇಶ್, ಸಂಘದ ಕಾರ್ಯದರ್ಶಿ ಆರ್.ಪರಮೇಶ್ವರ, ರಾಜ್ಯ ಕ್ರೀಡಾ<br />ಕಾರ್ಯದರ್ಶಿ ಮೋಹನ್ ಕುಮಾರ್, ಮಧುಗಿರಿ ಶೈಕ್ಷಣಿಕ ಜಿಲ್ಲೆ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ಬಿ.ಶುಭ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಮೊದಲಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>