<p><strong>ತುಮಕೂರು:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ‘ಭಾರತ್ ಜೋಡೊ ನ್ಯಾಯ’ ಯಾತ್ರೆಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಶುಭ ಹಾರೈಸಿದರು. ಪಕ್ಷದ ಕಚೇರಿಯಲ್ಲಿ ಭಾನುವಾರ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಕಳೆದ 10 ವರ್ಷಗಳ ಬಿಜೆಪಿ ಆಡಳಿತದ ತೆರಿಗೆಯಿಂದ ನೊಂದು, ಬೆಂದಿರುವ ಬಡ ಜೀವಿಗಳಿಗೆ ನ್ಯಾಯ ಯಾತ್ರೆ ಆಸರೆಯಾಗಲಿದೆ. ಜಿಎಸ್ಟಿ ಇನ್ನಿತರ ಪರೋಕ್ಷ ತೆರಿಗೆಗಳ ಮೂಲಕ ಹಗಲು ದರೋಡೆ ನಡೆಸುತ್ತಿರುವವರಿಗೆ ಈ ಯಾತ್ರೆ ನಡುಕ ಹುಟ್ಟಿಸಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಹೇಳಿದರು.</p>.<p>ಚುನಾವಣೆ ಬರುವವರೆಗೂ ಉಸಿರಾಡಲು ಪರದಾಡುತ್ತಿದ್ದ ಸಂಸದ ಅನಂತಕುಮಾರ್ ಹೆಗಡೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ಅವರ ಪಕ್ಷದ ಸಿದ್ಧಾಂತವನ್ನು ತೋರಿಸುತ್ತದೆ. ಕಾಂಗ್ರೆಸ್ ಎಂದಿಗೂ ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸಲಿ ಎಂದು ಎಚ್ಚರಿಸಿದರು.</p>.<p>ಮಾಜಿ ಶಾಸಕ ಎಸ್.ಶಫಿ ಅಹ್ಮದ್, ‘ರಾಹುಲ್ಗಾಂಧಿ ಅವರು ಯಾವುದೇ ರಾಜಕೀಯ ಉದ್ದೇಶವಿಲ್ಲದೆ, ಈ ದೇಶದ ಜನರಿಗೆ ನ್ಯಾಯ ಯಾತ್ರೆಗೆ ಮುಂದಾಗಿದ್ದಾರೆ. ಕಳೆದ ಒಂದು ವರ್ಷದಿಂದ ಜಾತಿ ತಾರತಮ್ಯದ ಅಗ್ನಿಕುಂಡದಲ್ಲಿ ಬೇಯುತ್ತಿರುವ ಮಣಿಪುರದಿಂದ ಪಾದಯಾತ್ರೆ ಪ್ರಾರಂಭಿಸಿದ್ದಾರೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ಮಹೇಶ್, ಮುಖಂಡರಾದ ಪಂಚಾಕ್ಷರಯ್ಯ, ಅಸ್ಲಾಂ ಪಾಷ, ಶ್ರೀನಿವಾಸ್, ಸಿಮೆಂಟ್ ಮಂಜ, ಶಿವಾಜಿ, ಅತೀಕ ಅಹ್ಮದ್, ನಾಗರಾಜು, ನರಸಿಂಹಯ್ಯ, ಬಿ.ಜಿ.ಲಿಂಗರಾಜು, ವಾಲೆಚಂದ್ರು, ಕೆಂಪಣ್ಣ, ಎಂ.ವಿ.ರಾಘವೇಂದ್ರಸ್ವಾಮಿ, ದಿನೇಶ್, ಷಣ್ಮುಖಪ್ಪ, ನಟರಾಜಶೆಟ್ಟಿ, ಶೆಟ್ಟಾಳಯ್ಯ, ಮರಿಚನ್ನಮ್ಮ, ಸುಜಾತಾ, ಆದಿಲ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ‘ಭಾರತ್ ಜೋಡೊ ನ್ಯಾಯ’ ಯಾತ್ರೆಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಶುಭ ಹಾರೈಸಿದರು. ಪಕ್ಷದ ಕಚೇರಿಯಲ್ಲಿ ಭಾನುವಾರ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.</p>.<p>‘ಕಳೆದ 10 ವರ್ಷಗಳ ಬಿಜೆಪಿ ಆಡಳಿತದ ತೆರಿಗೆಯಿಂದ ನೊಂದು, ಬೆಂದಿರುವ ಬಡ ಜೀವಿಗಳಿಗೆ ನ್ಯಾಯ ಯಾತ್ರೆ ಆಸರೆಯಾಗಲಿದೆ. ಜಿಎಸ್ಟಿ ಇನ್ನಿತರ ಪರೋಕ್ಷ ತೆರಿಗೆಗಳ ಮೂಲಕ ಹಗಲು ದರೋಡೆ ನಡೆಸುತ್ತಿರುವವರಿಗೆ ಈ ಯಾತ್ರೆ ನಡುಕ ಹುಟ್ಟಿಸಿದೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರಗೌಡ ಹೇಳಿದರು.</p>.<p>ಚುನಾವಣೆ ಬರುವವರೆಗೂ ಉಸಿರಾಡಲು ಪರದಾಡುತ್ತಿದ್ದ ಸಂಸದ ಅನಂತಕುಮಾರ್ ಹೆಗಡೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ಅವರ ಪಕ್ಷದ ಸಿದ್ಧಾಂತವನ್ನು ತೋರಿಸುತ್ತದೆ. ಕಾಂಗ್ರೆಸ್ ಎಂದಿಗೂ ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ಮುಂದೆ ಮಾತನಾಡುವಾಗ ಎಚ್ಚರಿಕೆ ವಹಿಸಲಿ ಎಂದು ಎಚ್ಚರಿಸಿದರು.</p>.<p>ಮಾಜಿ ಶಾಸಕ ಎಸ್.ಶಫಿ ಅಹ್ಮದ್, ‘ರಾಹುಲ್ಗಾಂಧಿ ಅವರು ಯಾವುದೇ ರಾಜಕೀಯ ಉದ್ದೇಶವಿಲ್ಲದೆ, ಈ ದೇಶದ ಜನರಿಗೆ ನ್ಯಾಯ ಯಾತ್ರೆಗೆ ಮುಂದಾಗಿದ್ದಾರೆ. ಕಳೆದ ಒಂದು ವರ್ಷದಿಂದ ಜಾತಿ ತಾರತಮ್ಯದ ಅಗ್ನಿಕುಂಡದಲ್ಲಿ ಬೇಯುತ್ತಿರುವ ಮಣಿಪುರದಿಂದ ಪಾದಯಾತ್ರೆ ಪ್ರಾರಂಭಿಸಿದ್ದಾರೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆ ಸದಸ್ಯ ಮಹೇಶ್, ಮುಖಂಡರಾದ ಪಂಚಾಕ್ಷರಯ್ಯ, ಅಸ್ಲಾಂ ಪಾಷ, ಶ್ರೀನಿವಾಸ್, ಸಿಮೆಂಟ್ ಮಂಜ, ಶಿವಾಜಿ, ಅತೀಕ ಅಹ್ಮದ್, ನಾಗರಾಜು, ನರಸಿಂಹಯ್ಯ, ಬಿ.ಜಿ.ಲಿಂಗರಾಜು, ವಾಲೆಚಂದ್ರು, ಕೆಂಪಣ್ಣ, ಎಂ.ವಿ.ರಾಘವೇಂದ್ರಸ್ವಾಮಿ, ದಿನೇಶ್, ಷಣ್ಮುಖಪ್ಪ, ನಟರಾಜಶೆಟ್ಟಿ, ಶೆಟ್ಟಾಳಯ್ಯ, ಮರಿಚನ್ನಮ್ಮ, ಸುಜಾತಾ, ಆದಿಲ್ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>