ತುಮಕೂರು: ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿಷ್ಠಿತ ಕಣಗಳಲ್ಲೊಂದಾದ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬಿಜೆಪಿ ಹಿರಿಯ ಮುಖಂಡ ಜಿ.ಎಸ್. ಬಸವರಾಜ್ ಅವರಲ್ಲಿ ಯಾರು ಗೆಲ್ಲಬಲ್ಲರು ಎಂಬ ಬಗ್ಗೆ ಬೆಟ್ಟಿಂಗ್ ಚಟುವಟಿಕೆ ತೆರೆಮರೆಯಲ್ಲಿ ಶುರುವಾಗಿದ್ದು, ಬೆಟ್ಟಿಂಗ್ ಬಾಜಿರಾಯರೂ ತಮ್ಮದೇ ಆದ ಜಾಲಗಳಲ್ಲಿ ಸಕ್ರಿಯರಾಗುತ್ತಿದ್ದಾರೆ ಎನ್ನಲಾಗಿದೆ.