ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾ: ನೀರು ಹಂಚಿಕೆಯಲ್ಲಿ ಅನ್ಯಾಯ

ಬೈಕ್‌ ರ‍್ಯಾಲಿಯಲ್ಲಿ ವಾಲ್ಮೀಕಿ ಸಂಜಯ ಕುಮಾರ ಸ್ವಾಮೀಜಿ
Last Updated 4 ಆಗಸ್ಟ್ 2021, 3:48 IST
ಅಕ್ಷರ ಗಾತ್ರ

ವೈ.ಎನ್.ಹೊಸಕೋಟೆ: ಭದ್ರಾ ಮೇಲ್ದಂಡೆ ಯೋಜನೆಯ ನೀರು ಹರಿದರೆ ತಾಲ್ಲೂಕಿನ ಬರ ದೂರವಾಗುತ್ತದೆ ಎಂದು ವಾಲ್ಮೀಕಿ ಸಂಜಯ ಕುಮಾರ ಸ್ವಾಮೀಜಿ ಹೇಳಿದರು.

ಗ್ರಾಮದಲ್ಲಿ ಮಂಗಳವಾರ ನೇರಳಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗ ಆಯೋಜಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯ ನೀರು ಹಂಚಿಕೆ ಅನ್ಯಾಯದ ವಿರುದ್ಧದ ಬೈಕ್ ಜಾಥಾದಲ್ಲಿ ಅವರು ಮಾತನಾಡಿದರು.

ಪಾವಗಡ ತಾಲ್ಲೂಕು ಸದಾ ಬರಗಾಲ ಪೀಡಿತ ಪ್ರದೇಶ. ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆ ಕೈಕೊಟ್ಟರೆ ಜನರ ಬದುಕು ದುಸ್ತರವಾಗುತ್ತದೆ. ಉದ್ಯೋಗಕ್ಕಾಗಿ ಗುಳೆ ಇಲ್ಲಿ ಸಾಮಾನ್ಯವಾಗಿದೆ. ಇದನ್ನು ತಪ್ಪಿಸಲು ಸರ್ಕಾರ ಭದ್ರಾ ಮೇಲ್ಡಂಡೆ ಯೋಜನೆಯ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಯೋಜನೆ ರೂಪಿಸಿದೆ. ಆದರೆ ಆ ಯೋಜನೆಯಲ್ಲಿ ತಾಲ್ಲೂಕಿಗೆ ಅನ್ಯಾಯವಾಗಿದ್ದು, ಕೇವಲ 0.54 ಟಿಎಂಸಿ ಅಡಿ ನೀರನ್ನು ನಿಗದಿಪಡಿಸಲಾಗಿದೆ ಎಂದರು.

ತಾಲ್ಲೂಕಿನ ಹೆಚ್ಚಿನ ರೈತರಿಗೆ ಇದರಿಂದ ಅನುಕೂಲವಾಗುವುದಿಲ್ಲ. ಹಾಗಾಗಿ ಸರ್ಕಾರ ತಾಲ್ಲೂಕಿಗೆ ಕನಿಷ್ಠ 4 ಟಿಎಂಸಿ ಅಡಿ ನೀರನ್ನು ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದರು.

ನಾಗೇಂದ್ರ ಕುಮಾರ್ ಮಾತನಾಡಿ, ಭದ್ರಾ ಮೇಲ್ದಂಡೆ ನೀರು ಹಂಚಿಕೆ ವೇಳೆ ತಾರತಮ್ಯ ಮಾಡಲಾಗಿದೆ. ಬೇರೆ ತಾಲ್ಲೂಕುಗಳಿಗೆ ಹೋಲಿಸಿದರೆ ಪಾವಗಡ ತಾಲ್ಲೂಕಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇದೆ. ಆದರೆ ಕೇವಲ 0.54 ಟಿಎಂಸಿ ಅಡಿ ನೀರು ನಿಗದಿಯಿಂದ ಅನ್ಯಾಯವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಯುವಜನರು ಹೋರಾಟ ಮಾಡಿ ಅಗತ್ಯವಿರುವಷ್ಟು ನೀರು ಪಡೆಯುವುದು ಅನಿವಾರ್ಯವಾಗಿದೆ ಎಂದರು.

ಬೈಕ್ ಜಾಥಾ ನಡೆಸಿ, ಸಹಿ ಸಂಗ್ರಹಿಸಲಾಯಿತು. ಚನ್ನಕೇಶವರೆಡ್ಡಿ, ಮಂಜುನಾಥ, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT