ತುಮಕೂರು: ಕೃಷಿ ಕಾಯ್ದೆ ವಾಪಸ್ಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆನೀಡಿರುವ ಬಂದ್ಗೆ ವಿವಿಧ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಇಳಿದಿವೆ. ಕಾರ್ಮಿಕ ಸಂಘಟನೆಗಳು, ಎಡ ಪಕ್ಷಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.
ಬಸ್, ಆಟೊ ಹಾಗೂ ಇತರ ವಾಹನಗಳ ಸಂಚಾರ ಮುಂದುವರೆದಿದೆ. ವಾಣಿಜ್ಯ, ವಹಿವಾಟು ಎಂದಿನಂತೆ ಆರಂಭವಾಗಿದೆ. ನಗರ ಸೇರಿದಂತೆ ಜಿಲ್ಲೆಯಲ್ಲಿ ಬಂದ್ ವಾತಾವರಣ ಕಂಡುಬರುತ್ತಿಲ್ಲ. ಎಲ್ಲೆಡೆ ಪ್ರತಿಭಟನೆಗಳು ಆರಂಭವಾಗಿವೆ.
ರೈತ ಸಂಘಟನೆ ಮುಖಂಡರು, ರೈತರು ನಗರ ಸಂಪರ್ಕಿಸುವ ರಸ್ತೆಗಳ ಮೂಲಕ ಮೆರವಣಿಗೆಯಲ್ಲಿ ಬಂದು ನಗರದ ಟೌನ್ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.