ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್ ಜೋಡೊ ಯಾತ್ರೆ ಸಮಯದಲ್ಲಿ ಕಾಂಗ್ರೆಸ್ ವಿರುದ್ಧ ಪೋಸ್ಟರ್

Last Updated 9 ಅಕ್ಟೋಬರ್ 2022, 11:15 IST
ಅಕ್ಷರ ಗಾತ್ರ

ತುಮಕೂರು: ಭಾರತ್ ಜೋಡೊ ಯಾತ್ರೆ ಸಾಗಿಬಂದ ಮಾರ್ಗ ಮಧ್ಯೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ವಿರುದ್ಧ ಪೋಸ್ಟರ್ ಅಂಟಿಸಿರುವುದು ಕಂಡು ಬಂತು.

ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಸಾಗಿದ ಚಿಕ್ಕನಾಯಕನಹಳ್ಳಿ ಪಟ್ಟಣದ ಪ್ರೌಢಶಾಲೆ ಸಮೀಪದ ಗೋಡೆ ಮೇಲೆ ರಾಜು ಎಂಬುವರ ಹೆಸರಿನಲ್ಲಿ ಈ ಪೋಸ್ಟರ್ ಅಂಟಿಸಲಾಗಿದೆ.

‘ಸಿದ್ದರಾಮಯ್ಯನವರೇ, ನಾನು ರಾಜು. ಕಾಂಗ್ರೆಸ್‌ನಿಂದಲೇ ನನ್ನ ಕೊಲೆ ಆಗಿದ್ದು. ಪಿಎಫ್‌ಐ, ಎಸ್‌ಡಿಪಿಐ ಮೇಲಿನ ನಿಮ್ಮ ಪ್ರೀತಿಗೆ, ಅವರ ಮೇಲಿನ ಪ್ರಕರಣಗಳನ್ನು ಕೈಬಿಟ್ಟಿದ್ದಕ್ಕೆ ನಾನು ಕೊಲೆಯಾದೆ. ಈ ಹೆಗ್ಗಳಿಕೆ ನಿಮಗೇ ಸಲ್ಲಲಿ’ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT