<p><strong>ತುಮಕೂರು: </strong>ಭೀಮ್ ಆರ್ಮಿ ಸಂಘಟನೆಯ ತುಮಕೂರು ಜಿಲ್ಲಾ ಘಟಕಕ್ಕೆ ಬುಧವಾರ ಚಾಲನೆ ನೀಡಲಾಯಿತು.</p>.<p>ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಾಲೆ ಚಂದ್ರಯ್ಯ, ಅಧ್ಯಕ್ಷರಾಗಿ ಎ.ಆರ್.ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾಗಿ ಅಬ್ಬಾಸ್, ಶಿವಪ್ರಸಾದ್, ಲಾರೆನ್ಸ್, ಕಾರ್ಯದರ್ಶಿಯಾಗಿ ರವಿಕುಮಾರ್ ಮತ್ತು ಕಾನೂನು ಸಲಹೆಗಾರರಾಗಿ ರವಿಗೌಡ ಆಯ್ಕೆಯಾಗಿದ್ದಾರೆ.</p>.<p>ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ, ಭೀಮ್ ಆರ್ಮಿಯು ಐದು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಚಂದ್ರಶೇಖರ್ ಆಜಾದ್ ರಾವಣ್ ಅವರಿಂದ ಸ್ಥಾಪಿಸಲ್ಪಟ್ಟಿತು. ರಾಜ್ಯದ ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಈಗ ತುಮಕೂರಿನಲ್ಲೂ ಬೆಳೆಯುತ್ತಿದೆ ಎಂದರು.</p>.<p>ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಕಾರ್ಮಿಕರ ಹಕ್ಕುಬಾಧ್ಯತೆಗಳಿಗಾಗಿ ಸಂಘಟನೆ ಧ್ವನಿ ಎತ್ತಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದೆ. ದಮನಿತ ಸಮುದಾಯದ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಖಂಡಿಸಲಿದೆ ಎಂದು ಅವರು ತಿಳಿಸಿದರು.</p>.<p>ತುಮಕೂರು ಘಟಕದಲ್ಲಿ ಈಗಾಗಲೇ 250 ಜನರು ಸಂಘಟನೆಯ ಸದಸ್ಯರಾಗಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 10,000 ಸದಸ್ಯರನ್ನು ನೋಂದಾಯಿಸುವ ಗುರಿಯನ್ನು ಹೊಂದಿದ್ದೇವೆ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಇಚ್ಛೆ ಇರುವ ಎಲ್ಲರೂ ನಮ್ಮ ಆರ್ಮಿಯ ಸದಸ್ಯರು ಆಗಬಹುದು ಎಂದರು.</p>.<p>ಸಂಘಟನೆಯ ಸದಸ್ಯರಾದ ಪಿ.ಶಿವಾಜಿ, ಎಚ್.ಎನ್.ಮಂಜುನಾಥ್, ಈರೇಹಳ್ಳಿ ದೇವರಾಜ್, ರವಿಗೌಡ ಮತ್ತು ತಂಗನಹಳ್ಳಿ ಅನ್ನಪೂರ್ಣೇಶ್ವರಿ ಮಠದ ಬಸವ ಮಹಾಲಿಂಗ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಭೀಮ್ ಆರ್ಮಿ ಸಂಘಟನೆಯ ತುಮಕೂರು ಜಿಲ್ಲಾ ಘಟಕಕ್ಕೆ ಬುಧವಾರ ಚಾಲನೆ ನೀಡಲಾಯಿತು.</p>.<p>ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಾಲೆ ಚಂದ್ರಯ್ಯ, ಅಧ್ಯಕ್ಷರಾಗಿ ಎ.ಆರ್.ಶ್ರೀನಿವಾಸ ಮೂರ್ತಿ, ಉಪಾಧ್ಯಕ್ಷರಾಗಿ ಅಬ್ಬಾಸ್, ಶಿವಪ್ರಸಾದ್, ಲಾರೆನ್ಸ್, ಕಾರ್ಯದರ್ಶಿಯಾಗಿ ರವಿಕುಮಾರ್ ಮತ್ತು ಕಾನೂನು ಸಲಹೆಗಾರರಾಗಿ ರವಿಗೌಡ ಆಯ್ಕೆಯಾಗಿದ್ದಾರೆ.</p>.<p>ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಂಪತ್ ಸುಬ್ಬಯ್ಯ, ಭೀಮ್ ಆರ್ಮಿಯು ಐದು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಚಂದ್ರಶೇಖರ್ ಆಜಾದ್ ರಾವಣ್ ಅವರಿಂದ ಸ್ಥಾಪಿಸಲ್ಪಟ್ಟಿತು. ರಾಜ್ಯದ ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಈಗ ತುಮಕೂರಿನಲ್ಲೂ ಬೆಳೆಯುತ್ತಿದೆ ಎಂದರು.</p>.<p>ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು, ಕಾರ್ಮಿಕರ ಹಕ್ಕುಬಾಧ್ಯತೆಗಳಿಗಾಗಿ ಸಂಘಟನೆ ಧ್ವನಿ ಎತ್ತಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದೆ. ದಮನಿತ ಸಮುದಾಯದ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಖಂಡಿಸಲಿದೆ ಎಂದು ಅವರು ತಿಳಿಸಿದರು.</p>.<p>ತುಮಕೂರು ಘಟಕದಲ್ಲಿ ಈಗಾಗಲೇ 250 ಜನರು ಸಂಘಟನೆಯ ಸದಸ್ಯರಾಗಿದ್ದಾರೆ. ಪ್ರತಿ ಜಿಲ್ಲೆಯಲ್ಲಿ 10,000 ಸದಸ್ಯರನ್ನು ನೋಂದಾಯಿಸುವ ಗುರಿಯನ್ನು ಹೊಂದಿದ್ದೇವೆ. ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಇಚ್ಛೆ ಇರುವ ಎಲ್ಲರೂ ನಮ್ಮ ಆರ್ಮಿಯ ಸದಸ್ಯರು ಆಗಬಹುದು ಎಂದರು.</p>.<p>ಸಂಘಟನೆಯ ಸದಸ್ಯರಾದ ಪಿ.ಶಿವಾಜಿ, ಎಚ್.ಎನ್.ಮಂಜುನಾಥ್, ಈರೇಹಳ್ಳಿ ದೇವರಾಜ್, ರವಿಗೌಡ ಮತ್ತು ತಂಗನಹಳ್ಳಿ ಅನ್ನಪೂರ್ಣೇಶ್ವರಿ ಮಠದ ಬಸವ ಮಹಾಲಿಂಗ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>