ಶಿಕ್ಷಣ ಅರಸಿ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದು, ವಿದ್ಯಾರ್ಥಿ ನಿಲಯಗಳ ಅವಶ್ಯಕತೆ ಇದೆ. ಹಾಲು ಒಕ್ಕೂಟ ಗ್ರಾಮೀಣ ಭಾಗದ ಮಕ್ಕಳಿಗಾಗಿ ಹಾಸ್ಟೆಲ್ ನಿರ್ಮಿಸುತ್ತಿರುವುದು ಹೆಮ್ಮೆಯ ಸಂಗತಿ. ಒಕ್ಕೂಟವು ಪ್ರಾರಂಭದಿಂದಲೂ ಉತ್ತಮ ಆಡಳಿತ ನೀಡುತ್ತಾ ಬರುತ್ತಿದೆ. ರೈತ ಭವನ, ವಿದ್ಯಾರ್ಥಿ ನಿಲಯ ಕಟ್ಟಿಸುವ ಮೂಲಕ ಬೇರೆ ಒಕ್ಕೂಟಗಳಿಗಿಂತ ವಿಭಿನ್ನ ರೀತಿಯಲ್ಲಿ ಗುರುತಿಸಿಕೊಂಡಿದೆ ಎಂದರು.