ತುಮಕೂರು ಸಮೀಪವಿರುವ ಕೆ.ಪಾಲಸಂದ್ರ ಪಾಳ್ಯದ ನಿವಾಸಿಗಳಾದ ಪ್ರವೀಣ್ ಹಾಗೂ ರಮೇಶ್ ಅವರು ವಸಂತ ನರಸಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಇರುವ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ಮುಂಜಾನೆ ವಾಪಸ್ ಮನೆಗೆ ಹಿಂತಿರುಗುವಾಗ ಹಿಂದಿನಿಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಈ ಇಬ್ಬರೂ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.