ತುಮಕೂರು: ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ತುಮಕೂರು ತಾಲ್ಲೂಕು ಹೆಬ್ಬೂರು ಬಳಿಯ ರಾಮೇನಹಳ್ಳಿ ನಿವಾಸಿಗಳಾದ ಚಿಕ್ಕಸ್ವಾಮಿ (32) ಕೃಷ್ಣಮೂರ್ತಿ (30) ಮೃತಪಟ್ಟಿದ್ದು, ಪೂರ್ಣಿಮಾ (32) ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ಪಲ್ಸರ್ ಬೈಕ್ನಲ್ಲಿ ತೆರಳುತ್ತಿದ್ದರು.