ಕುಣಿಗಲ್: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ರಾಜ್ಯ ಹೆದ್ದಾರಿ 33ರ ಗಿರಿಗೌಡನಪಾಳ್ಯ ಬಳಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.
ಗಿರಿಗೌಡನಪಾಳ್ಯದ ಮಹೇಶ್ (23) ಮೃತಪಟ್ಟವರು.
ಕಾರ್ಯ ನಿಮಿತ್ತ ಕುಣಿಗಲ್ ಪಟ್ಟಣಕ್ಕೆ ಬಂದು ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.