ಕೊಡಿಗೇನಹಳ್ಳಿ: ರಸ್ತೆ ಬದಿಯ ಗುಂಡಿಗೆ ಬಿದ್ದು ದ್ವಿಚಕ್ರವಾಹನ ಸವಾರ ಕೆ.ಪಿ. ನರಸಿಂಹಯ್ಯ (42) ಎಂಬುವರು ಸಾವನ್ನಪ್ಪಿರುವ ಘಟನೆ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ನರಸಿಂಹಯ್ಯ ಅವರು ರಾತ್ರಿ ಮೈದನಹಳ್ಳಿಯಲ್ಲಿ ನಡೆಯುತ್ತಿದ್ದ ಹೂವಿನ ತೇರು ನೋಡಲೆಂದು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ದೇವರತೋಪು ಬಳಿಯ ರಸ್ತೆಬದಿಯಲ್ಲಿದ್ದ ಗುಂಡಿಗೆ ಬಿದ್ದಿದ್ದಾರೆ.
ಎದೆ ಮತ್ತು ತಲೆಗೆ ತೀವ್ರತರ ಪೆಟ್ಟು ಬಿದ್ದಿದ್ದ ಅವರನ್ನು ತುಮಕೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕೊಡಿಗೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.