<p>ತುಮಕೂರು: ವಿಶ್ವವಿದ್ಯಾಲಯದ ಬಿದರೆಕಟ್ಟೆ ಕ್ಯಾಂಪಸ್ನ 15 ಎಕರೆ ವಿಸ್ತೀರ್ಣದಲ್ಲಿ ವಿಪ್ರೊ ಸಂಸ್ಥೆ ಸಹಯೋಗದಲ್ಲಿ ಜೀವವೈವಿಧ್ಯ ಅಭಯಾರಣ್ಯ ನಿರ್ಮಾಣವಾಗುತ್ತಿದ್ದು, ಸಂಸ್ಥೆಯ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಸ್ಥಳೀಯ ಸಸ್ಯ ಪ್ರಭೇದ ಸಂರಕ್ಷಿಸಲು, ಅರಣ್ಯ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ವಿಪ್ರೊ ಮುಂದಾಗಿದೆ. ಮೂರು ವರ್ಷದಲ್ಲಿ 3 ಸಾವಿರಕ್ಕೂ ಹೆಚ್ಚು ಸ್ಥಳೀಯ ಸಸ್ಯ ಪ್ರಭೇದಗಳನ್ನು ಅವುಗಳ ನೈಸರ್ಗಿಕ ವ್ಯವಸ್ಥೆಗೆ ಅಪಾಯವಾಗದಂತೆ ಬೆಳೆಸಲಾಗುತ್ತದೆ. ಸಂಶೋಧನಾ ಉದ್ದೇಶಕ್ಕೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶ’ ಎಂದು ವಿಪ್ರೊ ಸಂಸ್ಥೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿನೀತ್ ಅಗರವಾಲ್ ಹೇಳಿದರು.</p>.<p>ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ಪ್ರಾಧ್ಯಾಪಕರಾದ ಕೆ.ಜಿ.ಪರಶುರಾಮ, ಬಿ.ಕೆ.ಸುರೇಶ್, ಮೋಹನ್ರಾಮ್, ವಿಪ್ರೊ ಸಂಸ್ಥೆ ಉಪಾಧ್ಯಕ್ಷ ವಿಶ್ವನಾಥ್ ಕಾರ್ಕಡ, ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಬಿ.ಸಿ.ಪ್ರವೀಣ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಎಸ್.ಹನುಮಂತರಾಯಪ್ಪ, ಸಂಸ್ಥೆಯ ಎಂ.ವಿನಯ್, ಸಂಪತ್ಕುಮಾರ್, ಎಸ್.ಆರ್.ಈಶ್ವರಪ್ಪ, ದಯಾನಂದ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ವಿಶ್ವವಿದ್ಯಾಲಯದ ಬಿದರೆಕಟ್ಟೆ ಕ್ಯಾಂಪಸ್ನ 15 ಎಕರೆ ವಿಸ್ತೀರ್ಣದಲ್ಲಿ ವಿಪ್ರೊ ಸಂಸ್ಥೆ ಸಹಯೋಗದಲ್ಲಿ ಜೀವವೈವಿಧ್ಯ ಅಭಯಾರಣ್ಯ ನಿರ್ಮಾಣವಾಗುತ್ತಿದ್ದು, ಸಂಸ್ಥೆಯ ಅಧಿಕಾರಿಗಳು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>‘ಸ್ಥಳೀಯ ಸಸ್ಯ ಪ್ರಭೇದ ಸಂರಕ್ಷಿಸಲು, ಅರಣ್ಯ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ವಿಪ್ರೊ ಮುಂದಾಗಿದೆ. ಮೂರು ವರ್ಷದಲ್ಲಿ 3 ಸಾವಿರಕ್ಕೂ ಹೆಚ್ಚು ಸ್ಥಳೀಯ ಸಸ್ಯ ಪ್ರಭೇದಗಳನ್ನು ಅವುಗಳ ನೈಸರ್ಗಿಕ ವ್ಯವಸ್ಥೆಗೆ ಅಪಾಯವಾಗದಂತೆ ಬೆಳೆಸಲಾಗುತ್ತದೆ. ಸಂಶೋಧನಾ ಉದ್ದೇಶಕ್ಕೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಇದರ ಉದ್ದೇಶ’ ಎಂದು ವಿಪ್ರೊ ಸಂಸ್ಥೆ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ವಿನೀತ್ ಅಗರವಾಲ್ ಹೇಳಿದರು.</p>.<p>ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ಪ್ರಾಧ್ಯಾಪಕರಾದ ಕೆ.ಜಿ.ಪರಶುರಾಮ, ಬಿ.ಕೆ.ಸುರೇಶ್, ಮೋಹನ್ರಾಮ್, ವಿಪ್ರೊ ಸಂಸ್ಥೆ ಉಪಾಧ್ಯಕ್ಷ ವಿಶ್ವನಾಥ್ ಕಾರ್ಕಡ, ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಬಿ.ಸಿ.ಪ್ರವೀಣ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಎಸ್.ಹನುಮಂತರಾಯಪ್ಪ, ಸಂಸ್ಥೆಯ ಎಂ.ವಿನಯ್, ಸಂಪತ್ಕುಮಾರ್, ಎಸ್.ಆರ್.ಈಶ್ವರಪ್ಪ, ದಯಾನಂದ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>