ಮಳಿಗೆಯ ನೆಲ ಮಹಡಿಯಲ್ಲಿದ್ದ ಸಾಮಗ್ರಿಗಳು ಬೆಂಕಿಗೆ ಸುಟ್ಟು ಹೋಗಿವೆ. 2 ಕೂಲರ್, ಇತರೆ ಪರಿಕರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಆದಿ ನಾನ್ ಅಖಿಲ್ ಎಂಬುವರು ಹಲವು ವರ್ಷಗಳಿಂದ ಬಿರಿಯಾನಿ ಮಳಿಗೆ ನಡೆಸುತ್ತಿದ್ದರು. ಮಳಿಗೆಯಲ್ಲಿ ಸಿಬ್ಬಂದಿ ಕೆಲಸ ಮಾಡುವಾಗ ಬೆಂಕಿ ಕಾಣಿಸಿಕೊಂಡಿದೆ.