<p><strong>ತುಮಕೂರು</strong>: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರು ಬಿಟ್ ಕಾಯಿನ್ನಲ್ಲಿ ಹೂಡಿಕೆ ಮಾಡಿದರೆ ತ್ವರಿತವಾಗಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಒಡ್ಡಿದ ಆಮಿಷಕ್ಕೆ ಒಳಗಾದ ಇಲ್ಲಿಯ ನಿವಾಸಿಯೊಬ್ಬರು ₹79.75 ಲಕ್ಷ ಕಳೆದುಕೊಂಡಿದ್ದಾರೆ. </p>.<p>ನಗರದ ಕೆ.ಆರ್. ಬಡಾವಣೆಯ ಪಿ.ಕಿಶೋರ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿ. ಫೇಸ್ಬುಕ್ನಲ್ಲಿ ಪರಿಚಯವಾದ ಜಿಯಾ ಶರ್ಮಾ ಬಿಟ್ ಕಾಯಿನ್ ಹೂಡಿಕೆ ಮಾಡಿದರೆ ವೇಗವಾಗಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಹೇಳಿದ್ದಾರೆ.</p>.<p>ನಂತರ ವಾಟ್ಸ್ ಆ್ಯಪ್ನಲ್ಲಿ ‘Coinex’ ಎಂಬ ಆ್ಯಪ್ ಲಿಂಕ್ ಕಳುಹಿಸಿದ್ದಾರೆ. ವಂಚಕರು ಸೂಚಿಸಿದಂತೆ ಕಿಶೋರ್ ಹಣ ಹೂಡಿಕೆ ಮಾಡಿದ್ದಾರೆ. ಮೇ 23ರಿಂದ ಜುಲೈ 2ರ ವರೆಗೆ ಹಂತ ಹಂತವಾಗಿ ಒಟ್ಟು ₹79.75 ಲಕ್ಷವನ್ನು ಜಿಯಾ ಶರ್ಮಾ ಎಂಬುವರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ.</p>.<p>ಜುಲೈ 3ರಂದು ಹೂಡಿಕೆ ಮಾಡಿದ ಹಣ ವಾಪಸ್ ಕೇಳಿದ್ದಾರೆ. ₹58 ಲಕ್ಷ ತೆರಿಗೆ ಹಣ ವರ್ಗಾವಣೆ ಮಾಡಿದರೆ ಮಾತ್ರ ಎಲ್ಲ ಹಣ ವಾಪಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರಿಂದ ಅನುಮಾನ ಬಂದು ಸ್ನೇಹಿತರ ಬಳಿ ವಿಚಾರಿಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಸೈಬರ್ ಠಾಣೆಗೆ ಕಿಶೋರ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಫೇಸ್ಬುಕ್ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರು ಬಿಟ್ ಕಾಯಿನ್ನಲ್ಲಿ ಹೂಡಿಕೆ ಮಾಡಿದರೆ ತ್ವರಿತವಾಗಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಒಡ್ಡಿದ ಆಮಿಷಕ್ಕೆ ಒಳಗಾದ ಇಲ್ಲಿಯ ನಿವಾಸಿಯೊಬ್ಬರು ₹79.75 ಲಕ್ಷ ಕಳೆದುಕೊಂಡಿದ್ದಾರೆ. </p>.<p>ನಗರದ ಕೆ.ಆರ್. ಬಡಾವಣೆಯ ಪಿ.ಕಿಶೋರ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿ. ಫೇಸ್ಬುಕ್ನಲ್ಲಿ ಪರಿಚಯವಾದ ಜಿಯಾ ಶರ್ಮಾ ಬಿಟ್ ಕಾಯಿನ್ ಹೂಡಿಕೆ ಮಾಡಿದರೆ ವೇಗವಾಗಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಹೇಳಿದ್ದಾರೆ.</p>.<p>ನಂತರ ವಾಟ್ಸ್ ಆ್ಯಪ್ನಲ್ಲಿ ‘Coinex’ ಎಂಬ ಆ್ಯಪ್ ಲಿಂಕ್ ಕಳುಹಿಸಿದ್ದಾರೆ. ವಂಚಕರು ಸೂಚಿಸಿದಂತೆ ಕಿಶೋರ್ ಹಣ ಹೂಡಿಕೆ ಮಾಡಿದ್ದಾರೆ. ಮೇ 23ರಿಂದ ಜುಲೈ 2ರ ವರೆಗೆ ಹಂತ ಹಂತವಾಗಿ ಒಟ್ಟು ₹79.75 ಲಕ್ಷವನ್ನು ಜಿಯಾ ಶರ್ಮಾ ಎಂಬುವರು ತಿಳಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ.</p>.<p>ಜುಲೈ 3ರಂದು ಹೂಡಿಕೆ ಮಾಡಿದ ಹಣ ವಾಪಸ್ ಕೇಳಿದ್ದಾರೆ. ₹58 ಲಕ್ಷ ತೆರಿಗೆ ಹಣ ವರ್ಗಾವಣೆ ಮಾಡಿದರೆ ಮಾತ್ರ ಎಲ್ಲ ಹಣ ವಾಪಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದರಿಂದ ಅನುಮಾನ ಬಂದು ಸ್ನೇಹಿತರ ಬಳಿ ವಿಚಾರಿಸಿದಾಗ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಸೈಬರ್ ಠಾಣೆಗೆ ಕಿಶೋರ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>