ಮೂಲ ಸೌಕರ್ಯಗಳಾದ ಆಹಾರ, ನೀರು, ವಸತಿ, ಶಿಕ್ಷಣ, ಔಷಧಿ ಇತ್ಯಾದಿಗಳೆಲ್ಲವೂ ಸರ್ಕಾರದಿಂದಲೇ ನಡೆಯುತ್ತವೆ. ಆದ್ದರಿಂದ ನಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಲು ಯೋಗ್ಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹೊಣೆಗಾರಿಕೆ ಇದೆ. ಯುವಜನರ ಮತದಾನವು ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಪ್ರಜಾಪ್ರಭುತ್ವದ ವರದಾನ, ಸಂವಿಧಾನ ಸಂರಕ್ಷಣೆಯ ಸಾಧನವಾದ ಮತವನ್ನು ಸೂಕ್ತ ಹಾಗೂ ದಕ್ಷ ವ್ಯಕ್ತಿಗೆ ನೀಡಿ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಹೇಳಿದ್ದಾರೆ.