<p><strong>ಕುಣಿಗಲ್:</strong> ‘ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ, ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತ್ತು ವರ್ಷ ಎಂಟು ತಿಂಗಳು ಮೂರು ಬಾರಿ ಸಂಸದನಾಗಿ ಆಯ್ಕೆಯಾಗಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಚುನಾವಣೆಗಾಗಿ ರಾಜಕಾರಣ ಮಾಡದೆ, ಅಭಿವೃದ್ಧಿಗಾಗಿ ಶ್ರಮಿಸಿರುವೆ. ತಾಲ್ಲೂಕಿಗೆ ಹೇಮಾವತಿ ನೀರಿನ ವಿಚಾರದಲ್ಲಿ 25 ವರ್ಷಗಳಿಂದ ಅನ್ಯಾಯವಾಗಿದೆ. ₹950 ಕೋಟಿ ವೆಚ್ಚದ ಸಂಪರ್ಕ ಕಾಲುವೆ ಯೋಜನೆ ಅನುಷ್ಠಾನದ ಮೂಲಕ ಇದನ್ನು ಸರಿಪಡಿಸಲಾಗಿದೆ’ ಎಂದರು.</p>.<p>‘ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟ ಎಚ್.ಡಿ. ಕುಮಾರಸ್ವಾಮಿ ಅವರ ಬಾವನನ್ನು ಜೆಡಿಎಸ್ನಿಂದ ಕಣಕ್ಕಿಳಿಸದೆ, ಬಿಜೆಪಿಯಿಂದ ಕಣಕ್ಕಿಳಿಸಿ ನನ್ನನ್ನು ಸೋಲಿಸಲು ಸಂಚು ರೂಪಿಸಿದ್ದಾರೆ’ ಎಂದು ದೂರಿದರು.</p>.<p>ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದಾಗ ಸುಮ್ಮನಿದ್ದ ದೇವೇಗೌಡ ಚುನಾವಣೆ ಸಮಯದಲ್ಲಿ ಮಾತ್ರ ಮಾತನಾಡುತ್ತಿದ್ದಾರೆ ಎಂದರು.</p>.<p>ಮೇಕೆದಾಟು ಯೋಜನೆ ಕನಕಪುರದವರಿಗಲ್ಲ. ಬೆಂಗಳೂರಿನ ನೀರಿನ ಸಮಸ್ಯೆಗೆ ಉತ್ತರವಾಗಿದೆ. ಈ ಯೋಜನೆಗೆ ಕನಕಪುರದವರು ಅವರ ಜಮೀನುಗಳನ್ನು ತ್ಯಾಗ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಸಹೋದರರ ನಡುವೆ ಬಿರುಕು ಮೂಡಿಸಿಲ್ಲ. ಅವರುಗಳೆ ಕಿತ್ತಾಡಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಶಾಸಕ ಡಾ.ರಂಗನಾಥ್, ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಮುಖಂಡರಾದ ಕೋಘಟ್ಟ ರಾಜಣ್ಣ, ಮಾಗಡಯ್ಯ, ಗಾಯತ್ರಿ ಬಲರಾಂರಾಜು, ಗೌತಮಿ, ಸುಮತಿ, ಅನಸೂಯಮ್ಮ ವೈಕೆಆರ್, ಬಿ.ಕೆ.ರಾಮಣ್ಣ, ಹೊನ್ನೆಗೌಡ, ಗಂಗಶಾನಯ್ಯ, ಐ.ಜಿ.ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ‘ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ, ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತ್ತು ವರ್ಷ ಎಂಟು ತಿಂಗಳು ಮೂರು ಬಾರಿ ಸಂಸದನಾಗಿ ಆಯ್ಕೆಯಾಗಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಚುನಾವಣೆಗಾಗಿ ರಾಜಕಾರಣ ಮಾಡದೆ, ಅಭಿವೃದ್ಧಿಗಾಗಿ ಶ್ರಮಿಸಿರುವೆ. ತಾಲ್ಲೂಕಿಗೆ ಹೇಮಾವತಿ ನೀರಿನ ವಿಚಾರದಲ್ಲಿ 25 ವರ್ಷಗಳಿಂದ ಅನ್ಯಾಯವಾಗಿದೆ. ₹950 ಕೋಟಿ ವೆಚ್ಚದ ಸಂಪರ್ಕ ಕಾಲುವೆ ಯೋಜನೆ ಅನುಷ್ಠಾನದ ಮೂಲಕ ಇದನ್ನು ಸರಿಪಡಿಸಲಾಗಿದೆ’ ಎಂದರು.</p>.<p>‘ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟ ಎಚ್.ಡಿ. ಕುಮಾರಸ್ವಾಮಿ ಅವರ ಬಾವನನ್ನು ಜೆಡಿಎಸ್ನಿಂದ ಕಣಕ್ಕಿಳಿಸದೆ, ಬಿಜೆಪಿಯಿಂದ ಕಣಕ್ಕಿಳಿಸಿ ನನ್ನನ್ನು ಸೋಲಿಸಲು ಸಂಚು ರೂಪಿಸಿದ್ದಾರೆ’ ಎಂದು ದೂರಿದರು.</p>.<p>ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದಾಗ ಸುಮ್ಮನಿದ್ದ ದೇವೇಗೌಡ ಚುನಾವಣೆ ಸಮಯದಲ್ಲಿ ಮಾತ್ರ ಮಾತನಾಡುತ್ತಿದ್ದಾರೆ ಎಂದರು.</p>.<p>ಮೇಕೆದಾಟು ಯೋಜನೆ ಕನಕಪುರದವರಿಗಲ್ಲ. ಬೆಂಗಳೂರಿನ ನೀರಿನ ಸಮಸ್ಯೆಗೆ ಉತ್ತರವಾಗಿದೆ. ಈ ಯೋಜನೆಗೆ ಕನಕಪುರದವರು ಅವರ ಜಮೀನುಗಳನ್ನು ತ್ಯಾಗ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಸಹೋದರರ ನಡುವೆ ಬಿರುಕು ಮೂಡಿಸಿಲ್ಲ. ಅವರುಗಳೆ ಕಿತ್ತಾಡಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಶಾಸಕ ಡಾ.ರಂಗನಾಥ್, ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಮುಖಂಡರಾದ ಕೋಘಟ್ಟ ರಾಜಣ್ಣ, ಮಾಗಡಯ್ಯ, ಗಾಯತ್ರಿ ಬಲರಾಂರಾಜು, ಗೌತಮಿ, ಸುಮತಿ, ಅನಸೂಯಮ್ಮ ವೈಕೆಆರ್, ಬಿ.ಕೆ.ರಾಮಣ್ಣ, ಹೊನ್ನೆಗೌಡ, ಗಂಗಶಾನಯ್ಯ, ಐ.ಜಿ.ವಿಶ್ವನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>