<p><strong>ಶಿರಾ:</strong> ‘ದೇಶದಲ್ಲಿ ಜನರಿಗೆ ಕಾಂಗ್ರೆಸ್ ಬಗ್ಗೆ ಖಾತ್ರಿ ಬಂದಿದ್ದು ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಹೇಳಿದರು.</p>.<p>ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಐಟಿ, ಇಡಿ ಮತ್ತು ಸಿಬಿಐಗಳನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಮಣಿಸುತ್ತಿದೆ ಎಂದು ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಎಲೆಕ್ಟೋರಲ್ ಬಾಂಡ್ ಮೂಲಕ ಕೇಂದ್ರ ಸರ್ಕಾರ ₹6,060 ಕೋಟಿ ಹಗರಣ ನಡೆಸಿದರೂ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತುಟಿ ಬಿಚ್ಚುತ್ತಿಲ್ಲ. ಅಭಿವೃದ್ಧಿ ಕೆಲಸ ಕುಂಠಿತವಾಗುತ್ತಿದ್ದು ಜನತೆ ಬಿಜೆಪಿ ಬಗ್ಗೆ ಬೇಸತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಜನಪರ ಆಡಳಿತದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನ ಪಡೆಯುವುದು ಖಚಿತ ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಬಿಜೆಪಿ ಹಿಂದುತ್ವವನ್ನು ಬಂಡವಾಳವನ್ನಾಗಿ ಮಾಡಿಕೊಂಡು ಚುನಾವಣೆ ಗೆಲ್ಲಲು ಹೊರಟಿದೆ. ಕೋಮುವಾದಿಗಳಾದ ಇವರಿಗೆ ಜನತೆ ತಕ್ಕ ಪಾಠ ಕಲಿಸುವರು ಎಂದರು.</p>.<p>ಮತಪತ್ರದ ಮೂಲಕ ಚುನಾವಣೆ ನಡೆದರೆ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.</p>.<p>ತುಮಕೂರು ಜಿಲ್ಲೆ ವ್ತಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿ.ಎನ್.ಚಂದ್ರಪ್ಪ, ಎಸ್.ಪಿ.ಮುದ್ದಹನುಮೇಗೌಡ, ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸುವುದು ಖಚಿತ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಬರಗೂರು ನಟರಾಜು, ಕೆಪಿಸಿಸಿ ಸದಸ್ಯ ಟಿ.ಲೋಕೇಶ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ಅಮಾನುಲ್ಲಾ ಖಾನ್, ನಗರಸಭೆ ಸದಸ್ಯರಾದ ಅಜೇಯ್ ಕುಮಾರ್, ಕೃಷ್ಣಪ್ಪ, ರಾಧಾಕೃಷ್ಣ, ಮದ್ದಾಕನಹಳ್ಳಿ ತಿಪ್ಪೇಸ್ವಾಮಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ‘ದೇಶದಲ್ಲಿ ಜನರಿಗೆ ಕಾಂಗ್ರೆಸ್ ಬಗ್ಗೆ ಖಾತ್ರಿ ಬಂದಿದ್ದು ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಹೇಳಿದರು.</p>.<p>ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಐಟಿ, ಇಡಿ ಮತ್ತು ಸಿಬಿಐಗಳನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಮಣಿಸುತ್ತಿದೆ ಎಂದು ನಗರದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>ಎಲೆಕ್ಟೋರಲ್ ಬಾಂಡ್ ಮೂಲಕ ಕೇಂದ್ರ ಸರ್ಕಾರ ₹6,060 ಕೋಟಿ ಹಗರಣ ನಡೆಸಿದರೂ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತುಟಿ ಬಿಚ್ಚುತ್ತಿಲ್ಲ. ಅಭಿವೃದ್ಧಿ ಕೆಲಸ ಕುಂಠಿತವಾಗುತ್ತಿದ್ದು ಜನತೆ ಬಿಜೆಪಿ ಬಗ್ಗೆ ಬೇಸತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳಿಂದಾಗಿ ಜನರು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಜನಪರ ಆಡಳಿತದ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಗರಿಷ್ಠ ಸ್ಥಾನ ಪಡೆಯುವುದು ಖಚಿತ ಎಂದರು.</p>.<p>ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ, ಬಿಜೆಪಿ ಹಿಂದುತ್ವವನ್ನು ಬಂಡವಾಳವನ್ನಾಗಿ ಮಾಡಿಕೊಂಡು ಚುನಾವಣೆ ಗೆಲ್ಲಲು ಹೊರಟಿದೆ. ಕೋಮುವಾದಿಗಳಾದ ಇವರಿಗೆ ಜನತೆ ತಕ್ಕ ಪಾಠ ಕಲಿಸುವರು ಎಂದರು.</p>.<p>ಮತಪತ್ರದ ಮೂಲಕ ಚುನಾವಣೆ ನಡೆದರೆ ಬಿಜೆಪಿ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.</p>.<p>ತುಮಕೂರು ಜಿಲ್ಲೆ ವ್ತಾಪ್ತಿಯ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬಿ.ಎನ್.ಚಂದ್ರಪ್ಪ, ಎಸ್.ಪಿ.ಮುದ್ದಹನುಮೇಗೌಡ, ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸುವುದು ಖಚಿತ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಆರ್.ಮಂಜುನಾಥ್, ಬರಗೂರು ನಟರಾಜು, ಕೆಪಿಸಿಸಿ ಸದಸ್ಯ ಟಿ.ಲೋಕೇಶ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ಲಾ ಖಾನ್, ಅಮಾನುಲ್ಲಾ ಖಾನ್, ನಗರಸಭೆ ಸದಸ್ಯರಾದ ಅಜೇಯ್ ಕುಮಾರ್, ಕೃಷ್ಣಪ್ಪ, ರಾಧಾಕೃಷ್ಣ, ಮದ್ದಾಕನಹಳ್ಳಿ ತಿಪ್ಪೇಸ್ವಾಮಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>